Wednesday, September 16, 2026
Wednesday, September 16, 2026

ಜೂನ್ 12. “ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ” ದಿನಾಚರಣೆಗೆ ಸಕಲ ಸಿದ್ಧತೆ

Date:

ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ವಕೀಲರ ಸಂಘ, ಹಾಲು ಒಕ್ಕೂಟ ಹಾಗೂ ದೇಶೀಯ ವಿದ್ಯಾಶಾಲಾ ಸಮಿತಿ ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2026″ ಅನ್ನು ಹಮ್ಮಿಕೊಳ್ಳಲಾಗಿದೆ.
“ಬಾಲಕಾರ್ಮಿಕ ಪದ್ಧತಿಗೆ ರೆಡ್ ಕಾರ್ಡ್: ಮಕ್ಕಳಿಗೆ ನ್ಯಾಯಯುತ ಆಟದ ಅವಕಾಶ, ವಯಸ್ಕರಿಗೆ ಯೋಗ್ಯ ಕೆಲಸ” ಎಂಬ ಘೋಷಣೆಯೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.
ಜೂನ್ 12 ರಂದು ಬೆಳಿಗ್ಗೆ 09.30 ಕ್ಕೆ ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಸ್ತಬ್ಧಚಿತ್ರ ವಾಹನ ಚಾಲನೆ ಹಾಗೂ ಕರಪತ್ರಗಳ ಮೂಲಕ ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಅದೇ ದಿನ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಶಿವಮೊಗ್ಗದ ಮಹಾತ್ಮ ಗಾಂಧಿ ಪಾರ್ಕ್ ಎದುರಿಗಿರುವ ದೇಶೀಯ ವಿದ್ಯಾ ಸಂಸ್ಥೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ಬಿ.ಎಚ್. ನೆರವೇರಿಸುವರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಅಧ್ಯಕ್ಷರಾದ
ಪ್ರಭುಲಿಂಗ ಕವಳಿಕಟ್ಟಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ
ಹೇಮಂತ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ
ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್.,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ
ಮಂಜುನಾಥ್ ಎಸ್.ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಬಣಕಾರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ
ತಾಜುದ್ದೀನ್ ಖಾನ್,ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷರಾದ ಕೆ. ಬಸಪ್ಪಗೌಡ, ಕಾರ್ಯದರ್ಶಿಗಳಾದ ಎಸ್.ಪಿ. ದಿನೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ.ಆರ್. ರಾಘವೇಂದ್ರ ಸ್ವಾಮಿ ಪಾಲ್ಗೊಳ್ಳುವರು.
ವಿರಾಜಪೇಟೆ ತಾಲ್ಲೂಕಿನ ಮಾಯಮುಡಿಯ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ದಿವಾಕರ್ ಆರ್. ಅವರು “ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ 2016” ಎಂಬ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...