Sunday, June 14, 2026
Sunday, June 14, 2026

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

Date:

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಹಾಗೂ ಯುವಕರ ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಮಹತ್ವದ ನಿರ್ದೇಶನಗಳನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಹಲವು ಪ್ರಮುಖ ಘೋಷಣೆಗಳನ್ನು ಹಂಚಿಕೊಂಡರು.

ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಡಿ.ಕೆ. ಶಿವಕುಮಾರ್ ಸೂಚಿಸಿದರು. ಸಮಸ್ಯೆಗಳೊಂದಿಗೆ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಹಾಗೂ ಆಡಳಿತದಲ್ಲಿ ಸಾಮಾಜಿಕ ನ್ಯಾಯದ ತತ್ವವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿರುವ ಅವರು, ಸರ್ಕಾರಿ ಕಚೇರಿಗಳಲ್ಲಿ ಒಂದು ರೂಪಾಯಿ ಕೂಡ ಲಂಚಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಕೆ ನೀಡಿದರು. ಕಾನೂನುಬಾಹಿರ ಕೆಲಸಗಳಿಗೆ ಒತ್ತಡ ಹೇರುವವರ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯವನ್ನು ರೌಡಿಸಂ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಂದ ಮುಕ್ತಗೊಳಿಸಲು ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಸದಸ್ಯರ ವಿಶೇಷ ತಂಡ ರಚಿಸಿ ರೌಡಿಸಂ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ. ಜೊತೆಗೆ ನಕಲಿ ಹಣಕಾಸು ಸಂಸ್ಥೆಗಳ ವಿರುದ್ಧವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಸರ್ಕಾರ, ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಹಾಗೂ ಪಠ್ಯಪುಸ್ತಕಗಳ ವಿತರಣೆಯನ್ನು ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದೆ. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಹೊಸ CSR ನೀತಿಯನ್ನು ಜಾರಿಗೆ ತರಲಾಗುವುದು ಎಂದರು.

ಮಳೆ ಕೊರತೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳಿಗೂ ಸೂಚನೆ ನೀಡಲಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಎಲ್ ನಿನೋ ಪರಿಣಾಮ ಮತ್ತು ಮಳೆ ಕೊರತೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮೇವಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.

ಮತದಾನದ ಹಕ್ಕು ರಕ್ಷಣೆಗೆ ಒತ್ತು ನೀಡಿದ ಡಿ.ಕೆ. ಶಿವಕುಮಾರ್, ಪ್ರತಿಯೊಬ್ಬ ಮತದಾರರು ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಕಡ್ಡಾಯವಾಗಿ ಸಲ್ಲಿಸಿ ತಮ್ಮ ಮತದಾರರ ಹಕ್ಕು ಉಳಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ತ್ವರಿತವಾಗಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

D.K. Shivakumar ಯುವಕರ ಉದ್ಯೋಗಾವಕಾಶ ಹೆಚ್ಚಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಹೊಸ ಕಾರ್ಯಕ್ರಮ ಆರಂಭಿಸಲಾಗುತ್ತಿದೆ. ಜೊತೆಗೆ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ರಾಜಕೀಯೇತರ “ಭಾರತ್ ಜೋಡೋ ಯುವಕರ ಸಂಘ” ರಚಿಸಿ ವಾರ್ಷಿಕ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಘೋಷಿಸಿದರು.

ಸಂಚಾರ ದಟ್ಟಣೆ ನಿವಾರಣೆಗಾಗಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಾಣ ಹಾಗೂ ರಸ್ತೆ ಜಾಲದ ಗ್ರಿಡ್ ವ್ಯವಸ್ಥೆ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...

Chess ಜುಲೈ 4 ರಿಂದ ದೀರ್ಘ ಆವಧಿಯ ಚೆಸ್ ತರಬೇತಿ ಆರಂಭ.

Chess ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯು ಶಿವಮೊಗ್ಗ ನಗರದ ವಿವಿಧ...