Sunday, August 2, 2026
Sunday, August 2, 2026

ಶಿವಮೊಗ್ಗದಲ್ಲಿ ರೌಡಿಶೀಟರ್ ಹನುಮಂತು ಅಲಿಯಾಸ್ ಮಧು ಕಾಲಿಗೆ ಗುಂಡೇಟು

Date:

ಶಿವಮೊಗ್ಗದಲ್ಲಿ ರೌಡಿಶೀಟರ್ ಹನುಮಂತು ಅಲಿಯಾಸ್ ಮಧುಗೆ ಪೊಲೀಸರು ಗುಂಡೇಟು ನೀಡಿರುವ ಘಟನೆ ನಡೆದಿದೆ. ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆ ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಲಾಗಿದೆ.

ಶಿವಮೊಗ್ಗ ಹೊರವಲಯದ ಸುಬ್ಬಯ್ಯ ಮೆಡಿಕಲ್ ಕಾಲೇಜು ಸಮೀಪ ಈ ಘಟನೆ ನಡೆದಿದೆ. ನರಸಿಂಹ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹನುಮಂತು ಅಲಿಯಾಸ್ ಮಧುವನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.

ಮೂಲಗಳ ಪ್ರಕಾರ, ಚೈನ್ ಬಳಸಿ ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ ಮಧು, ಪೇದೆ ಅಂಜಿನಪ್ಪ ಅವರ ಮೇಲೂ ಹಲ್ಲೆ ನಡೆಸಿದ್ದಾನೆ. ಈ ವೇಳೆ ಆರೋಪಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ.

ಕೋಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ಎಚ್ಚರಿಕೆ ನೀಡಿದ ಬಳಿಕವೂ ಮಧು ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ, ಆತ್ಮರಕ್ಷಣೆಗಾಗಿ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಲಾಗಿದೆ.

ಗುಂಡೇಟಿನಿಂದ ಗಾಯಗೊಂಡ ಮಧುವನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ B. Nikhil ಆಸ್ಪತ್ರೆಗೆ ಭೇಟಿ ನೀಡಿ ಆರೋಪಿಯ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

ನರಸಿಂಹ ಕೊಲೆ ಪ್ರಕರಣದ ಹಿಂದಿನ ಪ್ರಮುಖ ರೂವಾರಿಯಾಗಿರುವ ಮಧು, ಕೊಲೆ ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿದ್ದಾನೆ. ಖಚಿತ ಮಾಹಿತಿ ಆಧರಿಸಿ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕಾರ್ಯಾಚರಣೆಯ ವೇಳೆ ಈ ಘಟನೆ ನಡೆದಿದೆ.

ಇದೇ ವೇಳೆ, ಆರೋಪಿಯ ಹಲ್ಲೆಯಿಂದ ಗಾಯಗೊಂಡ ಪೇದೆ ಅಂಜಿನಪ್ಪ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...