Monday, June 15, 2026
Monday, June 15, 2026

Chamber Of Commerce Shivamogga ಹೊಸ ಕಾಯ್ದೆಯಿಂದ ತೆರಿಗೆದಾರ ಸ್ನೇಹಿ ವ್ಯವಸ್ಥೆ ನಿರ್ಮಾಣ : ಪಿ.ವಿಮಲ್ ರಾಜ್

Date:

Chamber Of Commerce Shivamogga ಭಾರತದ ಆದಾಯ ತೆರಿಗೆ ಇಲಾಖೆಯು ಪ್ರಾರಂಭ್-2026 ಆರಂಭಿಸಿದ್ದು, ಇದು ದೇಶವ್ಯಾಪಿ ಜಾಗೃತಿ ಅಭಿಯಾನವಾಗಿದೆ. ನಾಗರಿಕರು, ವ್ಯವಹಾರಗಳು ಮತ್ತು ತೆರಿಗೆ ವೃತ್ತಿಪರರಿಗೆ ಹೊಸ ಆದಾಯ ತೆರಿಗೆ ಕಾಯ್ದೆ 2025ರ ಬಗ್ಗೆ ಶಿಕ್ಷಣ ನೀಡಲು ಪ್ರಾರಂಭಿಸಿದೆ ಎಂದು ಬೆಂಗಳೂರು ವಿಭಾಗದ ಆದಾಯ ತೆರಿಗೆ (ಎಸಿಐಟಿ) ಹೆಚ್ಚುವರಿ ಆಯುಕ್ತ ಪಿ.ವಿಮಲ್ ರಾಜ್ ಹೇಳಿದರು.

ಆದಾಯ ತೆರಿಗೆ ಇಲಾಖೆ ಶಿವಮೊಗ್ಗದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಜಿಲ್ಲಾ ಚಾರ್ಟಡ್ ಅಕೌಂಟೆಂಟ್, ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಸಹಯೋಗದೊಂದಿಗೆ ಸಂಘದ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಾರಂಭ್-2026 ಹೊಸ ಆದಾಯ ತೆರಿಗೆ ಕಾಯ್ದೆ 2025 ಕಾಯ್ದೆ ಬದಲಾವಣೆ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರದಲ್ಲಿ ಮಾತನಾಡಿದರು.

ಹೊಸ ಕಾಯ್ದೆ ತುಂಬಾ ಸರಳವಾಗಿ ಸಾಮಾನ್ಯ ಕರದಾತನಿಗೂ ಅರ್ಥವಾಗುವಂತೆ ಇದೆ. ಸಾಕಷ್ಟು ಬದಲಾವಣೆ ತಂದು ಪ್ರಮುಖ ತಿದ್ದುಪಡಿಗಳನ್ನು ತಂದಿರುವುದು ಕಾಯ್ದೆ ಬಗ್ಗೆ ಸಾಕಷ್ಟು ಗೊಂದಲ ಪರಿಹರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಆದಾಯ ತೆರಿಗೆ ಅಧಿಕಾರಿ ಕೆ.ಶ್ರೀನಿವಾಸ ರಾವ್ ಮಾತನಾಡಿ, ಸರ್ಕಾರವು ಆದಾಯ ತೆರಿಗೆ ವೆಬ್‌ಸೈಟ್ 2.0 ಬಿಡುಗಡೆ ಮಾಡಿದೆ. ಸುಧಾರಿತ ಸಂಚರಣೆ ಮತ್ತು ಸೇವಾ ವಿತರಣೆಗಾಗಿ ಹೆಚ್ಚುವರಿಯಾಗಿ ಇಲಾಖೆಯು ಟಿಡಿಎಸ್, ತೆರಿಗೆ ಪಾವತಿಗಳು ಮತ್ತು ರಿಟರ್ನ್ ಫೈಲಿಂಗ್ ಸಂಬಂಧಿಸಿದಂತೆ ತೆರಿಗೆದಾರರಿಗೆ ನೈಜ ಸಮಯದ ಮಾರ್ಗದರ್ಶನ ಒದಗಿಸಲು ವಿನ್ಯಾಸಗೊಳಿಸಲಾಗಿದೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಕರ್ನಾಟಕ ಆದಾಯ ತೆರಿಗೆಯಲ್ಲಿ ಮಾತ್ರವಲ್ಲ, ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆಯಲ್ಲೂ ಸಹ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಣೆಯಲ್ಲಿ ದಾಖಲೆಯಾಗಲು ತೆರಿಗೆ ಸಲಹೆಗಾರರು ಹಾಗೂ ಸನ್ನದು ಲೆಕ್ಕ ಪರಿಶೋಧಕರ ಸಹಕಾರ ಮತ್ತು ಶ್ರಮ ಅಪಾರ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ಚಾರ್ಟರ್ಡ್ ಅಕೌಂಟೆಂಟ್ ಸಂಘದ ಅಧ್ಯಕ್ಷ ಎನ್.ಎಲ್.ಪ್ರಸಾದ್ ಮಾತನಾಡಿ, ಹೊಸ ಕಾನೂನು ಅಂತರರಾಷ್ಟ್ರೀಯ ತೆರಿಗೆ, ವರ್ಗಾವಣೆ ಬೆಲೆ ನಿಗದಿ ಮತ್ತು ಪರಿವರ್ತನೆಯ ಅನುಸರಣೆಗೆ ಸಂಬಂಧಿಸಿದವು, ತೆರಿಗೆ ಸಲ್ಲಿಕೆಯನ್ನು ಹೆಚ್ಚು ಪಾರದರ್ಶಕ ಮಾಡುತ್ತದೆ ಎಂದರು.

ವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ವಿ ಮಂಜುನಾಥ ಮಾತನಾಡಿ, ಹತ್ತು ವರ್ಷಗಳಿಂದ ಆದಾಯ ತೆರಿಗೆ ಇಲಾಖೆಯು ಕೈಗೊಂಡಿರುವ ಅನೇಕ ಸುಧಾರಣೆ ಕ್ರಮಗಳಿಂದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿರುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.

Chamber Of Commerce Shivamogga ಸನ್ನದು ಲೆಕ್ಕ ಪರಿಶೋಧಕ ಜೆ.ಸುಜನ್ ಹಾಗೂ ಆದಾಯ ತೆರಿಗೆ ಸಲಹೆಗಾರ ಮಧುಸೂದನ್ ಐತಾಳ್, ಅವರು ಹೊಸ ಆದಾಯ ತೆರಿಗೆ ಕುರಿತು ಮಾತನಾಡಿದರು.

ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಕಾರ್ಯದರ್ಶಿ ಆರ್.ಮನೋಹರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ನಿರ್ದೇಶಕರಾದ ಪ್ರದೀಪ್ ಎಲಿ, ರವಿಪ್ರಕಾಶ್ ಜೆನ್ನಿ, ಗಣೇಶ್ ಎಂ.ಅಂಗಡಿ, ಕೆ.ಎನ್.ರಾಜಶೇಖರ್, ಮಾಜಿ ಅಧ್ಯಕ್ಷ ಕೆ.ವಿ.ವಸಂತ್ ಕುಮಾರ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Advanced Attendance Management System ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

Karnataka Advanced Attendance Management System ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ,...

MESCOM ಜೋಗ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ. 16 ರಂದು ಬೆಳಿಗ್ಗೆ...

Shri S.N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಚಾಲನೆ

Shri S.N. Channabasappa "ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಯಲ್ಲೂ ಸುಸಜ್ಜಿತ ಉದ್ಯಾನವನಗಳನ್ನು...