Shri S.N. Channabasappa “ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಯಲ್ಲೂ ಸುಸಜ್ಜಿತ ಉದ್ಯಾನವನಗಳನ್ನು (Parks) ಅಭಿವೃದ್ಧಿಪಡಿಸುವ ಮೂಲಕ ಸಾರ್ವಜನಿಕರಿಗೆ ಸ್ವಚ್ಛ, ಮಾಲಿನ್ಯಮುಕ್ತ ಮತ್ತು ಆಹ್ಲಾದಕರ ವಾತಾವರಣ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.
ನಗರದ ಯೋಜಿತ ಹಸಿರೀಕರಣ ಹಾಗೂ ಮೂಲಸೌಕರ್ಯ ಸುಧಾರಣೆಯ ಅಂಗವಾಗಿ ಶಾಸಕರು ಕ್ಷೇತ್ರ ವ್ಯಾಪ್ತಿಯ ಗುರುಪುರದ ಅಪೂರ್ವ ಬಡಾವಣೆಯಲ್ಲಿರುವ ಉದ್ಯಾನವನ, ವಿನೋಬನಗರದ ನರಸಿಂಹ ಬಡಾವಣೆಯಲ್ಲಿರುವ
ಪಾರ್ಶ್ವನಾಥ ಹಾಗೂ ನಾಗರಕಟ್ಟೆ ಪಾರ್ಕ್ ಹಾಗೂ ಗೋಪಾಳದ ಆಲ್ ಅರಿಂ ಲೇಔಟ್ ಪಾರ್ಕ್ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ ನೀಡಿದರು.
ಬಳಿಕ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡ ಶಾಸಕರು, “ಬಡಾವಣೆಗಳಲ್ಲಿ ಪಾರ್ಕ್ಗಳ ಸುಧಾರಣೆಯು ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯಕರ ಜೀವನಶೈಲಿಗೆ ಅತ್ಯಗತ್ಯವಾಗಿದೆ. ಕಾಮಗಾರಿಗಳನ್ನು ಯಾವುದೇ ಲೋಪದೋಷಗಳಿಲ್ಲದೆ ಅತ್ಯಂತ ಗುಣಮಟ್ಟದಿಂದ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು.
Shri S.N. Channabasappa ಇದೇ ಸಂದರ್ಭದಲ್ಲಿ ಬಡಾವಣೆಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಸ್ಥಳೀಯ ಇತರ ನಾಗರಿಕ ಬೇಡಿಕೆಗಳನ್ನು ಆಲಿಸಿ ಹಂತ-ಹಂತವಾಗಿ ಈಡೇರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ,
ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಎನ್ ಜಿ ನಾಗರಾಜ್, ವಾರ್ಡಿನ ಅಧ್ಯಕ್ಷರುಗಳು, ಮಹಾಶಕ್ತಿಕೇಂದ್ರದ ಪ್ರಮುಖರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಡಾವಣೆಗಳ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.
