ಶಿವಮೊಗ್ಗ ನಗರದ ನೀರು ಸರಬರಾಜು, ರಸ್ತೆ, ಚರಂಡಿ, ಮಳೆ ನೀರು ನಿರ್ವಹಣೆ, ಕಸ ವಿಲೇವಾರಿ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಸಾರ್ವಜನಿಕರ ಅಹವಾಲುಗಳು ಹಾಗೂ ಸಲಹೆಗಳನ್ನು ಆಲಿಸಲು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಶೇಷ ಮುಖಾಮುಖಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಕೆ. ಮಯಣ್ಣ ಗೌಡ ಭಾಗವಹಿಸಲಿದ್ದಾರೆ.
ಜೂನ್ 17ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಗರದ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದೆ.
ನಗರದ ಅಭಿವೃದ್ಧಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ನಾಗರಿಕರು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಿ ತಮ್ಮ ಅಭಿಪ್ರಾಯ, ಸಲಹೆ ಹಾಗೂ ಅಹವಾಲುಗಳನ್ನು ನೇರವಾಗಿ ಆಯುಕ್ತರ ಮುಂದಿಡುವ ಅವಕಾಶ ಇದಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲಸ್ವಾಮಿ ಆರ್.ಎಸ್. ತಿಳಿಸಿದ್ದಾರೆ.
