Wednesday, September 16, 2026
Wednesday, September 16, 2026

ಹೊಸನಗರ ಹೊರವಲಯ: ಬಸ್ ಮತ್ತು ಲಾರಿ ಡಿಕ್ಕಿ, ವಾಹನ ಸಂಚಾರಕ್ಕೆ ಕೆಲಕಾಲ ವ್ಯತ್ಯಯ

Date:

ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹೊಸನಗರದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ತಿರುವಿನಲ್ಲಿ ಕಳೆದ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ನಡೆದಿದೆ. ಸಾಗರದಿಂದ ಹೊಸನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗು ಜಯನಗರದಿಂದ ಆನಂದಪುರಕ್ಕೆ ತೆರಳುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದ್ದು ಸಾಗರ – ಹೊಸನಗರ ಮಧ್ಯೆ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ವಿಷಯ ತಿಳಿದ ಹೊಸನಗರ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ತೆರಳಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅದೃಷ್ಟವಶಾತ್ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...