Thursday, June 18, 2026
Thursday, June 18, 2026

ಅಂಗನವಾಡಿಯ ಬಿಸಿಯೂಟ ಕಾರ್ಯಕರ್ತೆಯರು ಮತ್ತುದಿನಗೂಲಿ ನೌಕರರನ್ನ ಖಾಯಂ ಮಾಡಬೇಕು : ಡಾ.ಹೆಚ್.ಎಸ್‌‌.ನಾಗೇಂದ್ರ ಹೆದ್ದೂರ್

Date:

“ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಮತ್ತು ದಿನಗೂಲಿ ನೌಕರರನ್ನು ಕೂಡಲೇ ಖಾಯಂ ಮಾಡಬೇಕು. ಇಲ್ಲದಿದ್ದರೆ ಸಂಸತ್‌ ಮತ್ತು ರಾಷ್ಟ್ರಪತಿ ಭವನಕ್ಕೆ ಮುತ್ತಿಗೆ ಹಾಕುತ್ತೇವೆ” ಎಂದು ಆಲ್ ಇಂಡಿಯಾ ಸ್ಟೇಟ್ ಗವರ್ನಮೆಂಟ್ ಕ್ಲಾಸ್ IV ಎಂಪ್ಲಾಯೀಸ್ ಫೆಡರೇಶನ್‌ನ ಆಲ್ ಇಂಡಿಯಾ ಉಪಾಧ್ಯಕ್ಷ, ಕರ್ನಾಟಕ ರಾಜ್ಯದ ನಾಯಕ ಡಾ.ಹೆಚ್.ಎಸ್. ನಾಗೇಂದ್ರ ಹೆದ್ದೂರು ಕೇಂದ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ “ಗ್ರ್ಯಾಂಡ್ ಪ್ರೊಟೆಸ್ಟ್ ರ‍್ಯಾಲಿ”ಯನ್ನು ಉದ್ದೇಶಿಸಿ ಅವರು ಮಾತನಾಡಿದರು. “ಇದು ಕೇವಲ ದೆಹಲಿಯ ಹೋರಾಟವಲ್ಲ. 26 ರಾಜ್ಯಗಳಿಂದ ನೌಕರರು ಬಂದಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿರುವ ಪ್ರತಿಭಟನೆ ಇದು. ಸರ್ಕಾರ ನಮ್ಮ ತಾಳ್ಮೆಯನ್ನು ಪರೀಕ್ಷಿಸಬಾರದು” ಎಂದು ಅವರು ಹೇಳಿದರು.

. ನಮ್ಮ 11 ಬೇಡಿಕೆಗಳಲ್ಲಿ ಅಂಗನವಾಡಿ, ಬಿಸಿಯೂಟ, ದಿನಗೂಲಿ ನೌಕರರ ಖಾಯಮಾತಿ ಹಾಗೂ ಹಳೆ ಪಿಂಚಣಿ ಯೋಜನೆ (OPS) ಜಾರಿ ಪ್ರಮುಖವಾದದ್ದು. ಬೇಡಿಕೆ ಈಡೇರದಿದ್ದರೆ ಮುಂದಿನ ಹೋರಾಟ ರಾಷ್ಟ್ರಪತಿ ಭವನದತ್ತ” ಎಂದು ಹೆಡ್ಡೂರು ಗುಡುಗಿದರು.

ಹೆಚ್.ಎಸ್. ನಾಗೇಂದ್ರ ಹೆದ್ದೂರು ಇವರು ಎಲ್ಲಾ ಇಲಾಖೆಯ ಡಿ ಗ್ರೂಪ್ ನೌಕರರಿಗೆ ಅಧ್ಯಕ್ಷರು,
ಆಗಿದ್ದಾರೆ ಹೊರಗುತ್ತಿಗೆದಾರರು, ಕಾಂಟ್ರಾಕ್ಟ್ ಬೇಸಿಕ್ ನವರು, ಗ್ರಾಮ ಸಹಾಯಕರು, ವಿ.ಎ. ಸಹಾಯಕರು, ಕ್ಷೇಮಾಭಿವೃದ್ಧಿಯವರು, , ಎಲ್.ಎಸ್.ನವರು, ನೀರುಗಂಟಿಗಳು, ಹಾಗೂ ಹೊರಗುತ್ತಿಗೆಯಲ್ಲಿರುವ ಡಾಕ್ಟರ್ ಗಳು, ಹಾಗೂ ಎಲ್ಲಾ ಇಲಾಖೆಯ ದಿನಗೂಲಿ ನೌಕರರಿಗೆ ಸರ್ಕಾರದಿಂದ ಖಾಯಂ ಮಾಡಬೇಕು ಮತ್ತು ಸರ್ಕಾರದ ಸವಲತ್ತು ಕೋಡಬೇಕು ಕೊಡದಿದ್ದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮಿರದವರೆಗೆ ೨೬ ರಾಜ್ಯಗಳಿಂದ ರಾಷ್ಟç ಭವನಕ್ಕೆ ಮುತ್ತಿಗೆ ಹಾಕುವುದಾಗಿ ಹೆದ್ದೂರು ನಾಗೇಂದ್ರರವರು ಎಲ್ಲಾ ರಾಜ್ಯದ ಸರ್ಕಾರಕ್ಕೆ ಸಲಹೆ ನೀಡುವುದರೊಂದಿಗೆ ಎಚ್ಚರಿಕೆ ಕೊಟ್ಟಿರುತ್ತಾರೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಳೆ ಪಿಂಚಣಿ, ಗುತ್ತಿಗೆ ಪದ್ಧತಿ ರದ್ದತಿ ಪ್ರಮುಖವಾಗಿತ್ತು. ಬೇಡಿಕೆ ಈಡೇರದಿದ್ದರೆ ದೇಶವ್ಯಾಪಿ ಮುಷ್ಕರ ಅನಿವಾರ್ಯ ಎಂದು ಫೆಡರೇಶನ್ ತಿಳಿಸಿದೆ.

ಈ ಪ್ರತಿಭಟನೆಯಲ್ಲಿ ಫೆಡರೇಶನ್‌ನ ರಾಷ್ಟ್ರೀಯ ನಾಯಕರಾದ ಗಣೇಶ್, ನಟರಾಜ್, ಶರ್ಮ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಲಕ್ಷಾಂತರ ನೌಕರರು ಕೆಂಪು ಧ್ವಜಗಳೊಂದಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...