Crop insurance schemes 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿಕಾರಿಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ದಿನಾಂಕ 31-07-2026 ರ ಒಳಗೆ ವಿಮೆ ಕಂತನ್ನು ಪಾವತಿಸಬೇಕಾಗಿ ವಿನಂತಿಸಲಾಗಿದೆ.
ಅಡಿಕೆ: ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ ರೂ. 1,28,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2560 ಅಥವಾ ಪ್ರತಿ ಗುಂಟೆಗೆ ರೂ. 64 ಪಾವತಿಸಬೇಕು.
Crop insurance schemes ಮಾವು: ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ ರೂ. 80,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 3200 ಅಥವಾ ಪ್ರತಿ ಗುಂಟೆಗೆ ರೂ. 80 ಪಾವತಿಸಬೇಕು.
ಕಾಳುಮೆಣಸು: ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ ರೂ. 47,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 1692 ಅಥವಾ ಪ್ರತಿ ಗುಂಟೆಗೆ ರೂ. 42.30 ಪಾವತಿಸಬೇಕು.
ಶುಂಠಿ: ಪ್ರತಿ ಹೆಕ್ಟೇರ್ಗೆ ವಿಮಾ ಮೊತ್ತ ರೂ. 1,30,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2600 ಅಥವಾ ಪ್ರತಿ ಗುಂಟೆಗೆ ರೂ. 65 ಪಾವತಿಸಬೇಕು.
ಮೇಲ್ಕಂಡ ಬೆಳೆಗಳನ್ನು ಬೆಳೆದಿರುವ ತಾಲೂಕಿನ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ವಿಮೆ ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಶಿಕಾರಿಪುರದ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
Crop insurance schemes ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ
Date:
