Rajiv Gandhi University of Health Sciences ಶಿವಮೊಗ್ಗದ ದುರ್ಗಿಗುಡಿಯಲ್ಲಿರುವ” ಕೃತ್ವಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಪ್ರಾಧ್ಯಾಪಕಿ ಮತ್ತು ವಿಭಾಗಾಧ್ಯಕ್ಷೆ ಡಾ. ಪ್ರಕೃತಿ ಮಂಚಾಲೆ ಅವರಿಗೆ ಬೆಂಗಳೂರು ಶ್ರೀ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.
ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ: “ಆಯುರ್ವೇದದಲ್ಲಿ ಸೌಂದರ್ಯವರ್ಧಕಗಳ ವಿಮರ್ಶಾತ್ಮಕ ಅಧ್ಯಯನ ಮತ್ತು ತಲೆಹೊಟ್ಟಿನ ಸೋರಿಯಾಸಿಸ್ ನಿರ್ವಹಣೆಯಲ್ಲಿ ಗುಂಜಾ ಭೃಂಗರಾಜ ತೈಲದ ಪರಿಣಾಮಕಾರಿತ್ವದ ಕ್ಲಿನಿಕಲ್ ಅಧ್ಯಯನ”. ಈ ಸಂಶೋಧನೆ ಆಯುರ್ವೇದದ ಪರಂಪರೆಯ ತತ್ವಗಳನ್ನು ಆಧುನಿಕ ಸೌಂದರ್ಯ ವಿಜ್ಞಾನದೊಂದಿಗೆ ಸಂಯೋಜಿಸುವ ಮಹತ್ವದ ಹೆಜ್ಜೆಯಾಗಿದೆ.
Rajiv Gandhi University of Health Sciences ಡಾ. . ಪ್ರಕೃತಿ ಮಂಚಾಲೆ ಅವರು ತಮ್ಮ ಸಂಶೋಧನಾ ಕಾರ್ಯವನ್ನು ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿಯ ಡಾ. ಜೋಶಿ ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ. ಈ ಪದವಿ ಶ್ರೀ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 28ನೇ ಪದವಿ ಪ್ರದಾನ ಸಮಾರಂಭದಲ್ಲಿ, ಜೂನ್ 16, 2026 ರಂದು ಮುಖ್ಯಮಂತ್ರಿ ಶ್ರೀ.ಡಿ.ಕೆ.ಶಿವಕುಮಾರ್ ರವರ ಪ್ರಥಮ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗಿದೆ.
ಇವರಿಗೆ ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕ, ರೋಟರಿ ಜ್ಯೂಬಿಲಿ, ಯಕ್ಷಗಾನ ಸೇವಾ ಸಂಸ್ಥೆ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ಅಭಿನಂದಿಸಿದ್ದಾರೆ.
Rajiv Gandhi University of Health Sciences ಶಿವಮೊಗ್ಗದ ಡಾ.ಪ್ರಕೃತಿ ಮಂಚಾಲೆ ಅವರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಪಿಹೆಚ್ ಡಿ ಪದವಿ ಪ್ರದಾನ
Date:
