Thursday, June 25, 2026
Thursday, June 25, 2026

ಜಿಲ್ಲೆಯ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಯಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ – ಬಿ.ವೈ.ರಾಘವೇಂದ್ರ

Date:

ಶಿವಮೊಗ್ಗ ಜಿಲ್ಲೆಯಾದ್ಯಂತ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ರೈತರ ಪ್ರಮುಖ ಸಮಸ್ಯೆಗಳ ಕುರಿತು ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉನ್ನತಾಧಿಕಾರಿಗಳ ತುರ್ತು ಪರಾಮರ್ಶನಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರು, ಸಂಕಷ್ಟದಲ್ಲಿರುವ ರೈತರಿಗೆ ತ್ವರಿತ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ಸಮಸ್ಯೆಗೆ ವಿಳಂಬವಿಲ್ಲದೆ ಸ್ಪಂದಿಸಬೇಕೆಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ಅಡಿಕೆ ಬೆಳೆಗಾರರ ಸಮಸ್ಯೆ ಪ್ರಮುಖವಾಗಿ ಚರ್ಚೆಗೆ ಬಂದಿತು. ಶಿವಮೊಗ್ಗ ಗ್ರಾಮಾಂತರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆಲಕಚ್ಚಿರುವ ಅಡಿಕೆ ಮರಗಳಿಗೆ ಪರಿಹಾರ ಒದಗಿಸುವ ಕುರಿತು ಸರ್ಕಾರಕ್ಕೆ ಸಲ್ಲಿಸಲಾಗಿರುವ ಪ್ರಸ್ತಾವನೆಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು.

ಇದೇ ವೇಳೆ, 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (R-WBCIS) ಅಡಿಯಲ್ಲಿ ರೈತರಿಗೆ ಪರಿಹಾರ ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲಾಯಿತು. ಅರ್ಹ ರೈತರಿಗೆ ನ್ಯಾಯ ದೊರಕುವಂತೆ ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲೆಯ ಪ್ರಮುಖ ನದಿಗಳ ಹರಿವು ಹಾಗೂ ಜಲಾಶಯಗಳ ನೀರಿನ ಸಂಗ್ರಹದ ಸ್ಥಿತಿಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಲಿಫ್ಟ್ ಇರಿಗೇಶನ್ ಪಂಪ್‌ಗಳು, ಮೋಟಾರುಗಳ ಕಾರ್ಯಕ್ಷಮತೆ ಮತ್ತು ವಿದ್ಯುತ್ ಬಿಲ್ ನಿರ್ವಹಣೆ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಹಾಳಾಗಿರುವ ಮಳೆಮಾಪನ ಕೇಂದ್ರಗಳನ್ನು ತಕ್ಷಣ ದುರಸ್ತಿಗೊಳಿಸಿ, ನಿಖರ ಹವಾಮಾನ ಮಾಹಿತಿ ದೊರಕುವಂತೆ ಕ್ರಮ ವಹಿಸಲು ಸಭೆಯಲ್ಲಿ ಆದೇಶಿಸಲಾಯಿತು.

ಮುಂಬರುವ ದಿನಗಳಲ್ಲಿ ರೈತರಿಗೆ ಯಾವುದೇ ಕೊರತೆ ಉಂಟಾಗದಂತೆ ಮೇವು, ರಾಸಾಯನಿಕ ಗೊಬ್ಬರ ಸೇರಿದಂತೆ ಅಗತ್ಯ ಕೃಷಿ ಪರಿಕರಗಳ ದಾಸ್ತಾನು, ವಿತರಣೆ ಹಾಗೂ ಉಳಿಕೆ ಪ್ರಮಾಣದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಗೆ ಯಾವುದೇ ರೀತಿಯ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಬಿ.ವೈ. ರಾಘವೇಂದ್ರ ಸ್ಪಷ್ಟಪಡಿಸಿದರು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬಾಕಿ ಇರುವ ಪ್ರಸ್ತಾವನೆಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಅವರು ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...