Thursday, June 25, 2026
Thursday, June 25, 2026

ತಾಂತ್ರಿಕ ಕಾರಣ ಅಥವಾ ತಪ್ಪು ಮಾಹಿತಿಯಿಂದ ಬಿಪಿಎಲ್ ಕಾರ್ಡುಗಳು ಎಪಿಎಲ್ ಆಗಿ ಬದಲಾಗಿದ್ದರೆ ಸರಿಪಡಿಸಲು 45 ದಿನಗಳ ಕಾಲಾವಕಾಶ ಇದೆ- ಹೆಚ್.ಎಂ.ಮಧು

Date:

ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಕುರಿತು ಫಲಾನುಭವಿಗಳು ಯಾವುದೇ ರೀತಿಯ ಗೊಂದಲಕ್ಕೀಡಾಗಬಾರದು. ಸದ್ಯಕ್ಕೆ ಈ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಿವೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಹೆಚ್. ಎಂ. ಮಧು ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆಯ ಕುರಿತು ಸೋಷಿಯಲ್ ಮೀಡಿಯಾ ಮತ್ತು ಕೆಲವರು ಬದಲಾವಣೆ ಕುರಿತು ಮಾಹಿತಿ ಹರಿಬಿಡುತ್ತಿದ್ದಾರೆ. ಸರ್ಕಾರದಿಂದ ಇನ್ನೂ ಯಾವುದೇ ರೀತಿಯ ಆದೇಶಗಳು ಬಂದಿಲ್ಲ. ಆದೇಶ ಬರುವವರೆಗೆ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರೆಯುತ್ತವೆ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಅಥವಾ ಬ್ಯಾಂಕ್ ಖಾತೆ ಜೋಡಣೆ ಸಮಸ್ಯೆಯಿಂದ ಬಾಕಿ ಉಳಿದಿರುವ ಮಹಿಳೆಯರ ಖಾತೆಗಳಿಗೆ ಶೀಘ್ರವಾಗಿ ಹಣ ಜಮಾ ಆಗಲು ಕ್ರಮ ಕೈಗೊಳ್ಳಬೇಕು ಎಂದ ಅವರು ಬಾಕಿ ಇರುವ ಅರ್ಜಿಗಳನ್ನು ತಕ್ಷಣವೇ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲ್ಲೂಕಿನಲ್ಲಿ ಈವರೆಗೆ 108232 ಫಲಾನುಭವಿಗಳು ನೋಂದಣಿಯಾಗಿದ್ದು, 42 ಫಲಾನುಭವಿಗಳ ಎನ್‌ಪಿಸಿಐ ಬಾಕಿ ಇದೆ. 2044 ಐಟಿ/ಜಿಎಸ್‌ಜಿ ಫಲಾನುಭವಿಗಳಿದ್ದು 304 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮರಣ ಹೊಂದಿರುವ ಬಗ್ಗೆ 332 ಅರ್ಜಿ ಸ್ವೀಕರಿಸಲಾಗಿದೆ ಎಂದರು.
ಪಡಿತರ ಚೀಟಿ ಪರಿಷ್ಕರಣೆ ವೇಳೆ ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಿರುವ 4150 ಕಾರ್ಡ್ಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಅರ್ಹರಾಗಿದ್ದರೂ ಕೆಲವು ತಾಂತ್ರಿಕ ಕಾರಣಗಳಿಂದ ಅಥವಾ ತಪ್ಪು ಮಾಹಿತಿಯಿಂದ ಬಿಪಿಎಲ್ ಕಾರ್ಡ್ಗಳು ಎಪಿಲ್ ಕಾರ್ಡುಗಳಾಗಿ ಬದಲಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸರ್ಕಾರ 45 ದಿನಗಳ ಕಾಲಾವಕಾಶ ನೀಡಿದೆ. ಆದರೆ ಈ ಗ್ರೇಸ್ ಅವಧಿಯನ್ನು 90 ದಿನಗಳ ವರೆಗೆ ವಿಸ್ತರಿಸಿದರೆ ಬಡವರಿಗೆ ಅನುಕೂಲವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ತಾಲ್ಲೂಕಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಪಡೆಯುತ್ತಿರುವ ಗ್ರಾಹಕರ ವಿವರಗಳನ್ನು ಪಡೆದ ಅಧ್ಯಕ್ಷರು, ತಾಂತ್ರಿಕ ದೋಷಗಳಿಂದ ವಂಚಿತರಾದ ಗ್ರಾಹಕರ ಸಮಸ್ಯೆಗಳನ್ನು ಮೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹರಿಸಬೇಕು. ಹಾಗೂ ಕಮರ್ಷಿಯಲ್‌ಗಾಗಿ ಯಾರಾದರೂ ಈ ಯೋಜನೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದರೆ ರದ್ದುಪಡಿಸಬೇಕೆಂದರು.
ಯುವನಿಧಿ ಮತ್ತು ಶಕ್ತಿ ಯೋಜನೆ: ಪದವಿ ಮುಗಿಸಿ ನಿರುದ್ಯೋಗಿಗಳಾಗಿರುವ ಯುವಕ-ಯುವತಿಯರಿಗೆ ಭತ್ಯೆ ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತಾಲ್ಲೂಕಿನಲ್ಲಿ ಈವರೆಗೆ 34088 ಫಲಾನುಭವಿಗಳಿಗೆ ರೂ.10,36,86000 ಹಣವನ್ನು ಜಮಾ ಮಾಡಲಾಗಿದೆ ಎಂದರು.
ತಾಲ್ಲೂಕಿನಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣದ ಯಶಸ್ವಿ ಅನುಷ್ಠಾನದ ಕುರಿತು ಸಾರಿಗೆ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್ ಶಿವಣ್ಣ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಸುತ್ತೋಲೆಗಳು ಬಂದಲ್ಲಿ ತಮ್ಮ ಗಮನಕ್ಕೆ ತರಬೇಕು. ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಗೊಂದಲಕ್ಕೀಡಾಗದAತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರು, ತಾಲ್ಲೂಕು ಇಓ ಪರಮೇಶ್ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...