Friday, June 26, 2026
Friday, June 26, 2026

ವರದಕ್ಷಿಣೆ ಕಿರುಕುಳ: ಪತ್ನಿಯ ದೂರು.ಆರೋಪ ಸಾಬೀತಾಗಿ ಪತಿರಾಯನಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

Date:

ಬಳ್ಳಾರಿ ಜಿಲ್ಲೆಯ ಕೊಟ್ಟೂರು ವಾಸಿ ಮಂಜುನಾಥ್ ಇವರು ತಮ್ಮ ಪತ್ನಿ ಸುಮರವರಿಗೆ ಹೆಚ್ಚಿನ ವರದಕ್ಷಿಣೆ, ಸೈಟ್ ಹಾಗೂ ಬಂಗಾರ ತರಲು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಾಗಿ 2017ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿ ಪ್ರಭಾವತಿ ಸಿ. ಇವರು ಪ್ರಕರಣದ ತನಿಖೆ ನಡೆಸಿ 2018ರಲ್ಲಿ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿರುತ್ತಾರೆ.

ಸಾಕ್ಷಿ ವಿಚಾರಣೆ ನಡೆಸಿ ಪರಸ್ಪರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಇವರು ದಿ:24/06/2026 ರಂದು ಆರೋಪಿ ಮಂಜುನಾಥನಿಗೆ ಕಲಂ.: 498(ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷ ಸಾದಾ ಸಜೆ ಶಿಕ್ಷೆ ಹಾಗೂ ಹತ್ತು ಸಾವಿರ ರೂ.ಗಳ ದಂಡ ಹಾಗೂ ಕಲಂ.506 ಐಪಿಸಿಗೆ 2 ವರ್ಷ ಸಾದಾ ಶಿಕ್ಷೆ ಮತ್ತು ರೂ. 5000/- ದಂಡವನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.

ಅಭಿಯೋಜನೆಯ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರೈತರು ಬರಗಾಲ ಎದುರಿಸಲು ಅಧಿಕಾರಿಗಳು ನೆರವಾಗಿ: ಬಿ.ವೈ.ರಾಘವೇಂದ್ರ

B.Y. Raghavendra ಕಳೆದ ಏಪ್ರಿಲ್, ಮೇ ಮಾಹೆಯಲ್ಲಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ...

ವ್ಯಕ್ತಿ ನಾಪತ್ತೆಯಾಗಿ 26ವರ್ಷದ ನಂತರ ಠಾಣೆಯಲ್ಲಿ ದಾಖಲೆಯಾದ ಪ್ರಕರಣದ ಮಾಹಿತಿ

ಮಾಳೂರು ಪೊಲೀಸ್ ಠಾಣೆಯಲ್ಲಿ ತಡವಾಗಿ ದಾಖಲಾದ ದೂರಿನ್ವಯ 26 ವರ್ಷಗಳ ಹಿಂದೆ...

Department of Social Welfare ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ‌ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ...