Wednesday, August 12, 2026
Wednesday, August 12, 2026

ಜೂನ್ 30. ನವಿಲೆಯಲ್ಲಿ ರಸಗೊಬ್ಬರ ಕೊರತೆ ಬಳಕೆ ಮತ್ತು ಪರ್ಯಾಯ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Date:

ರಸಗೊಬ್ಬರಗಳ ಕೊರತೆ, ಸಮರ್ಪಕ ಬಳಕೆ ಹಾಗೂ ಪರ್ಯಾಯ ವ್ಯವಸ್ಥೆಗಳ ಕುರಿತು ರೈತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಜೂನ್ 30, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ನವಿಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶೇಷ ಕಾರ್ಯಾಗಾರ ಆಯೋಜಿಸಲಾಗಿದೆ.

ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಹಾಗೂ ಜಿಲ್ಲಾ ಕೃಷಿಕ ಸಮಾಜದ ಆಶ್ರಯದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ.

ಕಾರ್ಯಾಗಾರದಲ್ಲಿ ಕೃಷಿ ವಿಜ್ಞಾನಿಗಳು ಹಾಗೂ ತಂತ್ರಜ್ಞರು ರಸಗೊಬ್ಬರಗಳ ಲಭ್ಯತೆ, ಸಮರ್ಪಕ ಬಳಕೆ, ಪರ್ಯಾಯ ಪೋಷಕಾಂಶ ನಿರ್ವಹಣೆ ಸೇರಿದಂತೆ ರೈತರಿಗೆ ಅಗತ್ಯವಾದ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಜಿಲ್ಲೆಯ ರೈತರು ಹಾಗೂ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ವಿಜಿ ಶ್ರೀಧರ (ವರದಾಮೂಲ) ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...