Samanvaya Trust ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ವಿನೋಬನಗರ ನಿವಾಸಿ ಎಸ್.ವಿ.ಚಂದ್ರಕಲಾ ಅವರಿಗೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಸಮನ್ವಯ ಟ್ರಸ್ಟ್ ನೇತೃತ್ವ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಶಿವಮೊಗ್ಗದ ಜಿಲ್ಲೆಯಲ್ಲಿನ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡುವ ಮೂಲಕ ಗೌರವಿಸುವ ಕೆಲಸವನ್ನು ಟ್ರಸ್ಟ್ ವತಿಯಿಂದ ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ.
ಎಸ್.ವಿ.ಚಂದ್ರಕಲಾ ಅವರು ಮನೆ ಆವರಣದಲ್ಲಿ ಸುಂದರವಾದ ಪರಿಸರ ನಿರ್ಮಾಣ ಮಾಡಿಕೊಂಡಿದ್ದಾರೆ. ಮನೆ ಆವರಣದಲ್ಲಿ ಅತ್ಯಂತ ಉತ್ತಮ ಪರಿಸರ ನಿರ್ಮಿಸಿದ್ದಾರೆ. ಪಕ್ಷಿಗಳಿಗೆ ಅನುಕೂಲ ಆಗುವ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ. ಆಯುರ್ವೇದ ಗಿಡಗಳನ್ನು ಬೆಳೆಸುತ್ತಿದ್ದಾರೆ.
ಚಂದ್ರಕಲಾ ಅವರು ಬೋನ್ಸಾಯ್ ಗಿಡಗಳನ್ನು ವರ್ಷಗಳಿಂದ ಬೆಳೆಸಿಕೊಂಡು ಬರುತ್ತಿದ್ದು, 35-40 ವರ್ಷದ ಆಲದ ಮರ ಸೇರಿದಂತೆ ವೈವಿಧ್ಯ ರೀತಿ ಬೋನ್ಸಾಯ್ ಗಿಡಗಳನ್ನು ಪಾಟ್ಗಳಲ್ಲಿ ಬೆಳೆಸಿ ಪೋಷಿಸುತ್ತಿದ್ದಾರೆ. ಬೋನ್ಸಾಯ್ ಗಿಡಗಳ ಬಗ್ಗೆ ಜನರಲ್ಲೂ ಜಾಗೃತಿ ಮೂಡಿಸಿ ಬೆಳೆಸಲು ಪ್ರೋತ್ಸಾಹಿಸುತ್ತಿದ್ದಾರೆ.
ಆಯುರ್ವೇದಿಕ್ ಗಿಡಗಳನ್ನು ಬೆಳೆಸುವ ಜತೆಯಲ್ಲಿ ಮಲೆನಾಡಿನ ಔಷಧೀಯ ಗಿಡಮೂಲಿಕೆಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಮನೆಯಲ್ಲಿ ಎಲ್ಲರಿಗೂ ಪರಿಸರದ ಬಗ್ಗೆ ವಿಶೇಷ ಪ್ರೀತಿ ಇದೆ. ಚಂದ್ರಕಲಾ ಅವರ ಪರಿಸರ ಕಾಳಜಿ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಅಭಿನಂದಿಸಿದೆ.
Samanvaya Trust ಸಮನ್ವಯ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ಉದ್ಯಮಿ ಅಬ್ದುಲ್ ಮುಜೀಬ್ ಅವರು ಪರಿಸರ ಕುಟುಂಬ ಪ್ರಶಸ್ತಿಯನ್ನು ಚಂದ್ರಕಲಾ ಅವರಿಗೆ ನೀಡಿ ಗೌರವಿಸಿದರು. ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ, ಸಂಸ್ಥಾಪಕ ಸದಸ್ಯೆ ಸ್ಮಿತಾ ಇದ್ದರು.
Samanvaya Trust ವಿ.ಚಂದ್ರಕಲಾ ಅವರಿಗೆ ಸಮನ್ವಯ ಪರಿಸರ ಕುಟುಂಬ ಪ್ರಶಸ್ತಿ
Date:
