Sunday, June 28, 2026
Sunday, June 28, 2026

Siddharamaiah ಮುಖ್ಯಮಂತ್ರಿ ಸಿಂಹಾಸನ ನಶ್ವರ.ಜನತೆಯ ಹೃದಯ ಸಿಂಹಾಸನ ಶಾಶ್ವತ- ಸಿದ್ಧರಾಮಯ್ಯ.

Date:

Siddharamaiah ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿ ಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು.
ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.ಪದತ್ಯಾಗದ ನಂತರ ಮೊದಲಸಲ ಹುಟ್ಟೂರಿಗೆ ಕಾಲಿಟ್ಟಾಗ
ಅವರ ಪ್ರತಿಕ್ರಿಯೆ ಇದಾಗಿದೆ.
ಅಲ್ಲಿ ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ ಎಂದಿದ್ದಾರೆ.

Siddharamaiah ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು.
ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ.

ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಮಾಜಿ ಸೀಎಂ ಸಿದ್ಧರಾಮಯ್ಯ ಧನ್ಯತೆ ಅರ್ಪಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Pulse Polio ಪೋಲಿಯೊ ಹನಿ:ಸುರಕ್ಷಿತ‌ ಉಚಿತ ಮತ್ತು ಪರಿಣಾಮಕಾರಿ.ನೆರೆದೇಶದ ವೈರಸ್ ನಿರೋಧಕ: ಡಾ.ರಘುನಂದನ್

Pulse Polio  " ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ...

Pace college Students Bus Accident ಅಂಗಡಿಗೆ ನುಗ್ಗಿದ ಕಾಲೇಜು ಬಸ್.!ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ.

Pace college Students Bus Accident ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೆಡಿಕಟ್ಟೆಯಲ್ಲಿ...

D.K. Shivakumar ತೆರಿಗೆ ಸೋರಿಕೆಗೆ ಅವಕಾಶ ಇರಬಾರದು.ಯಾವುದೇ ರೀತಿ ರಾಜಿ,ನಿರ್ಲಕ್ಷ್ಯಕ್ಕೆ ಆಸ್ಪದವಿರಬಾರದು- ಡಿ.ಕೆ.ಶಿವಕುಮಾರ್.

D.K. Shivakumar ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ...

B.Y. Raghavendra “ಖೇಲೋ ಇಂಡಿಯಾ “ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಖೇಲೋ ಇಂಡಿಯಾ' ಯೋಜನೆಯಡಿ ₹5 ಕೋಟಿ...