B.Y. Raghavendra ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಖೇಲೋ ಇಂಡಿಯಾ’ ಯೋಜನೆಯಡಿ ₹5 ಕೋಟಿ ವೆಚ್ಚದಲ್ಲಿ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಇಂಡೋರ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
ಸದರಿ ಕ್ರೀಡಾಂಗಣದ ನಿರ್ಮಾಣ ಕಾರ್ಯವು ನಿರೀಕ್ಷಿತ ವೇಗದಲ್ಲಿ ನಡೆಯದೇ ಮಂದಗತಿಯಲ್ಲಿ ಸಾಗುತ್ತಿದ್ದ ಹಿನ್ನೆಲೆಯಲ್ಲಿ, ಇಂದು ಕುವೆಂಪು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳೊಂದಿಗೆ ಕಾಲೇಜು ಆವರಣಕ್ಕೆ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿ ನೀಡಿ, ಕಾಮಗಾರಿಯ ಪ್ರಸ್ತುತ ಸ್ಥಿತಿಗತಿಯನ್ನು ಖುದ್ದಾಗಿ ಪರಿಶೀಲಿಸಿದರು..
B.Y. Raghavendra ಸ್ಥಳದಲ್ಲೇ ಉಪಸ್ಥಿತರಿದ್ದ ಗುತ್ತಿಗೆದಾರರು, ಅಭಿಯಂತರರು ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬಿ.ವೈ.ರಾಘವೇಂದ್ರ ಅವರು ಚರ್ಚಿಸಿದರು.
ಕಾಮಗಾರಿಯಲ್ಲಿ ಎದುರಾಗುತ್ತಿರುವ ಅಡಚಣೆಗಳನ್ನು ತಕ್ಷಣ ನಿವಾರಿಸಲು ಸಂಸದ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು .
ನಮ್ಮ ಜಿಲ್ಲೆಯ ಯುವ ಕ್ರೀಡಾ ಪ್ರತಿಭೆಗಳಿಗೆ ಜಾಗತಿಕ ಮಟ್ಟದ ಕ್ರೀಡಾ ಸೌಲಭ್ಯಗಳನ್ನು ಸ್ಥಳೀಯವಾಗಿಯೇ ಒದಗಿಸಿ, ಅವರನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ.
