Friday, July 3, 2026
Friday, July 3, 2026

ವಿದ್ಯಾರ್ಥಿಗಳು ಉತ್ತಮ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು- ಡಾ.ಹೆಚ್.ಎಂ.ಶಿವಕುಮಾರ್

Date:

ನಮ್ಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಪರಿಷತ್ತಿನ ಪದಗ್ರಹಣ ಸಮಾರಂಭವು ದಿನಾಂಕ 02-07-2026 ರಂದು ಬೆಳಿಗ್ಗೆ 11.00 ಗಂಟೆಗೆ ಶಾಲಾ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಹೆಚ್ ಎಂ ಶಿವಕುಮಾರ್ ರವರು ಶಾಲೆಯ ಧ್ವಜ ಹಾಗೂ 4 ಹೌಸ್ ಗಳ ಧ್ವಜವನ್ನು ಅನಾವರಣಗೊಳಿಸಿದರು. ಅತಿಥಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದ ಸಮ್ಮುಖದಲ್ಲಿ ಶಾಲೆಯ ಹೆಡ್ ಬಾಯ್, ಹೆಡ್ ಗರ್ಲ್, ಹೌಸ್ ಕ್ಯಾಪ್ಟನ್‌ಗಳು, ಉಪ ಕ್ಯಾಪ್ಟನ್‌ಗಳು ಹಾಗೂ ಇತರ ವಿದ್ಯಾರ್ಥಿ ನಾಯಕರುಗಳಿಗೆ ಬ್ಯಾಡ್ಜ್‌ಗಳನ್ನು ನೀಡಲಾಯಿತು.

ತದನಂತರ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರು ಪ್ರಮಾಣ ವಚನ ಬೋಧಿಸಿದರು. ನಾಯಕರು ಪ್ರಮಾಣ ವಚನ ಸ್ವೀಕರಿಸಿ, ಶಾಲೆಯ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

ಡಾ. ಹೆಚ್ ಎಂ ಶಿವಕುಮಾರ್ ರವರು ತಮ್ಮ ಸಂದೇಶದಲ್ಲಿ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಂತೆ, ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಹಾಗೂ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಕೊನೆಯಲ್ಲಿ ಎಲ್ಲ ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಸೇವಾ ತೆರಿಗೆ: ಹತ್ತುವರ್ಷಗಳು.ಒಂದು ಅವಲೋಕನ.ಲೇ: ಆರ್.ಮನೋಹರ್.

Shivamogga News ಜುಲೈ 1, 2017 ರಂದು ಮಧ್ಯರಾತ್ರಿ ಹಳೆಯ ಸಂಸತ್ತಿನ...