Monday, July 6, 2026
Monday, July 6, 2026

ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೋಲಿಸ್ ಠಾಣಾ ವ್ಯಾಪ್ತಿಯ ಬಾರ್ಕೂರು ಪ್ರಾ.ಆ.ಕೇಂದ್ರದ ಎದುರು ಸುಮಾರು 62 ವರ್ಷದ ಮಹಿಳೆಯು ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದು, ಈಕೆಯನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜ.15 ರಂದು ಮೃತಪಟ್ಟಿರುತ್ತಾರೆ. ಈಕೆ ತನ್ನ ಹೆಸರು ಲೀಲಾ ಅಲಿಯಾಸ್ ಶಾರದಾ ಅಲಿಯಾಸ್ ಕೆಂಚಮ್ಮ ಎಂದು ಹಾಗು ಗಾಜನೂರು, ಆಯನೂರು ಕಡೆಯವಳೆಂದು ಹೇಳಿಕೊಂಡಿರುತ್ತಾರೆ. ಈಕೆಯ ವಾರಸುದಾರರು ಪತ್ತೆಯಾಗದ ಕಾರಣ ಮರಣೋತ್ತರ ಶವಪರೀಕ್ಷೆ ಮಾಡಿಸಿ, ಕ್ರಮದಂತೆ ಮೃತದೇಹವನ್ನು ದಫನ ಮಾಡಲಾಗಿರುತ್ತದೆ.
ಮೃತ ಮಹಿಳೆಯ ಚಹರೆ 5.3 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಬಲಭುಜದ ಕಾಲರ್ ಬೋನ್‌ನಲ್ಲಿ ಹಾಗೂ ಎಡಗೈ ಕಪ್ಪು ಮಚ್ಚೆ ಇದ್ದು, ಎಡಗೈ ಮಣಿಗಂಟಿಗೆ ಕಪ್ಪು ದಾರ ಕಟ್ಟಿರುತ್ತಾರೆ. ಮೃತ ಮಹಿಳೆಯ ವಾರಸುದಾರರ ಬಗ್ಗೆ ಸುಳಿವು ಇದ್ದಲ್ಲಿ, ಬ್ರಹ್ಮಾವರ ಪೋಲಿಸ್ ಠಾಣೆಯ ದೂ. ಸಂ: 9480805453/ 9480805432, ಅಥವಾ ಇ-ಮೇಲ್ : brahmavaraudp@ksp.gov.in ಹಾಗೂ cpibrahmavaraudp@ksp.gov.in ಉಡುಪಿ ಜಿಲ್ಲೆಯ ಕಂಟ್ರೋಲ್ ರೂಮ್ ದೂ.ಸಂ: 0820-2526709/ 2526444 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadra Dam ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ

Bhadra Dam ಭದ್ರಾ ಜಲಾಶಯಕ್ಕೆ ಮಳೆ ಹಿನ್ನೆಲೆಯಲ್ಲಿ ನಿರಂತರವಾಗಿ ನೀರಿನ ಹರಿವು...

Klive Special Article ಮಕ್ಕಳು ಉತ್ತಮ ನಾಗರೀಕರಾಗಲು ಸ್ಕೌಟ್ಸ್ ಗೈಡ್ಸ್ ಪ್ರೇರಣೆ

-ಪುನರ್ನಿರ್ಮಿತ ಧ ರಾ ಮ ಸ್ಕೌಟ್ ಭವನ ಇಂದು ಉದ್ಘಾಟನೆ, ತನ್ನಿಮಿತ್ತ...

DC Shivamogga ಮತದಾರರ ಪಟ್ಟಿ ಪರಿಷ್ಕರಣೆ, ಸಹಕರಿಸಲು ಜಿಲ್ಲಾ ಜನತೆಗೆ ಡೀಸಿ ಪ್ರಭುಲಿಂಗ ಕವಳಿಕಟ್ಟಿ ಮನವಿ

DC Shivamogga ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು...

B.Y. Raghavendra ನಮ್ಮ ಸಹಕಾರಿ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸದಸ್ಯರ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖ : ಬಿ.ವೈ.ರಾಘವೇಂದ್ರ

B.Y. Raghavendra ಅಂತರರಾಷ್ಟ್ರೀಯ ಸಹಕಾರಿ ದಿನ–2026 ಹಾಗೂ ಕೇಂದ್ರ ಸಹಕಾರ ಸಚಿವಾಲಯ...