Sunday, August 23, 2026
Sunday, August 23, 2026

ಶಿಕಾರಿಪುರದಲ್ಲಿ ಶ್ರೀಲಂಕಾ ಸಂಸದರ ಭೇಟಿ: ಭಾರತ-ಶ್ರೀಲಂಕಾ ಬಾಂಧವ್ಯ, ಕೃಷಿ ಮತ್ತು ಅಭಿವೃದ್ಧಿ ಕುರಿತು ಚರ್ಚೆ

Date:

ಶಿಕಾರಿಪುರದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಶ್ರೀಲಂಕಾದ ಜಾಫ್ನಾ ಮತ್ತು ಕಿಲಿನೊಚ್ಚಿ ಕ್ಷೇತ್ರದ ಗೌರವಾನ್ವಿತ ಸಂಸದ ಶ್ರೀ ಶ್ರೀಧರನ್ ಶಿವಜ್ಞಾನಂ ಅವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಭೇಟಿ ನೀಡಿದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಶ್ರೀಲಂಕಾ ನಿಯೋಗವನ್ನು ಮಲೆನಾಡಿನ ಸಾಂಪ್ರದಾಯಿಕ ಪದ್ಧತಿಯಂತೆ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು.

ಭೇಟಿಯ ವೇಳೆ ಭಾರತ ಮತ್ತು ಶ್ರೀಲಂಕಾ ನಡುವಿನ ಸುದೀರ್ಘ ಸಾಂಸ್ಕೃತಿಕ ಬಾಂಧವ್ಯ, ಉಭಯ ದೇಶಗಳ ರಾಜಕೀಯ ಬೆಳವಣಿಗೆಗಳು, ಪ್ರಾದೇಶಿಕ ಅಭಿವೃದ್ಧಿ ಹಾಗೂ ಪರಸ್ಪರ ಸಹಕಾರಕ್ಕೆ ಸಂಬಂಧಿಸಿದ ವಿವಿಧ ಮಹತ್ವದ ವಿಷಯಗಳ ಕುರಿತು ಸುದೀರ್ಘ ಹಾಗೂ ಸೌಹಾರ್ದಯುತ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಅವರು ಮಲೆನಾಡಿನ ಕೃಷಿ ಪದ್ಧತಿ, ಪ್ರವಾಸೋದ್ಯಮ ಹಾಗೂ ಐತಿಹಾಸಿಕ ಪರಂಪರೆಯ ಬಗ್ಗೆ ವಿಶೇಷ ಆಸಕ್ತಿ ವ್ಯಕ್ತಪಡಿಸಿದರು. ಈ ಭೇಟಿ ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮದಲ್ಲಿ ಶ್ರೀಲಂಕಾದ ನಿಯೋಗದ ಸದಸ್ಯರು, ಸ್ಥಳೀಯ ಗಣ್ಯರು ಹಾಗೂ ಭಾಗದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...