ಶಿಕಾರಿಪುರದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಶ್ರೀಲಂಕಾದ ಜಾಫ್ನಾ ಮತ್ತು ಕಿಲಿನೊಚ್ಚಿ ಕ್ಷೇತ್ರದ ಗೌರವಾನ್ವಿತ ಸಂಸದ ಶ್ರೀ ಶ್ರೀಧರನ್ ಶಿವಜ್ಞಾನಂ ಅವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಭೇಟಿ ನೀಡಿದರು.
ಸಂಸದ ಬಿ.ವೈ. ರಾಘವೇಂದ್ರ ಅವರು ಶ್ರೀಲಂಕಾ ನಿಯೋಗವನ್ನು ಮಲೆನಾಡಿನ ಸಾಂಪ್ರದಾಯಿಕ ಪದ್ಧತಿಯಂತೆ ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು.
ಭೇಟಿಯ ವೇಳೆ ಭಾರತ ಮತ್ತು ಶ್ರೀಲಂಕಾ ನಡುವಿನ ಸುದೀರ್ಘ ಸಾಂಸ್ಕೃತಿಕ ಬಾಂಧವ್ಯ, ಉಭಯ ದೇಶಗಳ ರಾಜಕೀಯ ಬೆಳವಣಿಗೆಗಳು, ಪ್ರಾದೇಶಿಕ ಅಭಿವೃದ್ಧಿ ಹಾಗೂ ಪರಸ್ಪರ ಸಹಕಾರಕ್ಕೆ ಸಂಬಂಧಿಸಿದ ವಿವಿಧ ಮಹತ್ವದ ವಿಷಯಗಳ ಕುರಿತು ಸುದೀರ್ಘ ಹಾಗೂ ಸೌಹಾರ್ದಯುತ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಅವರು ಮಲೆನಾಡಿನ ಕೃಷಿ ಪದ್ಧತಿ, ಪ್ರವಾಸೋದ್ಯಮ ಹಾಗೂ ಐತಿಹಾಸಿಕ ಪರಂಪರೆಯ ಬಗ್ಗೆ ವಿಶೇಷ ಆಸಕ್ತಿ ವ್ಯಕ್ತಪಡಿಸಿದರು. ಈ ಭೇಟಿ ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ ಎಂದು ತಿಳಿದುಬಂದಿದೆ.
ಕಾರ್ಯಕ್ರಮದಲ್ಲಿ ಶ್ರೀಲಂಕಾದ ನಿಯೋಗದ ಸದಸ್ಯರು, ಸ್ಥಳೀಯ ಗಣ್ಯರು ಹಾಗೂ ಭಾಗದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
