Sunday, August 23, 2026
Sunday, August 23, 2026

S.N. Channabasappa ಬಡ ಜನತೆಗೆ ಮತ್ತು ಆಶ್ರಯರಹಿತ ಕುಟುಂಬಗಳಿಗೆ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು‌ ಯೋಜನೆಗಳ ಪ್ರಮುಖ ಅಜೆಂಡಾ : ಎಸ್.ಎನ್.ಚನ್ನಬಸಪ್ಪ

Date:

S.N. Channabasappa “ಕ್ಷೇತ್ರದ ಬಡ ಹಾಗೂ ಆಶ್ರಯ ರಹಿತ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಹಾಗೂ ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ನಗರಾಭಿವೃದ್ಧಿ ಯೋಜನೆಯ ಮಹತ್ವಾಕಾಂಕ್ಷಿ ಅಜೆಂಡಾವಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಶಾಸಕರು ಕ್ಷೇತ್ರ ಪ್ರವಾಸ ಕೈಗೊಂಡು, ಶಿವಮೊಗ್ಗ ನಗರದ ವಾರ್ಡ್ ನಂಬರ್ 8ರ ವ್ಯಾಪ್ತಿಗೆ ಬರುವ ಹುಚ್ಚರಾಯ ಕಾಲೋನಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಬಡಾವಣೆಯ ಗಲ್ಲಿಗಳಿಗೂ ಸಂಚರಿಸಿ, ಅಲ್ಲಿನ ಸಾರ್ವಜನಿಕ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿದರು.

ಹಕ್ಕುಪತ್ರ ವಿತರಣೆಗೆ ಚುರುಕು: ಹುಚ್ಚರಾಯ ಕಾಲೋನಿಯಲ್ಲಿ ದಶಕಗಳಿಂದ ವಾಸಿಸುತ್ತಿದ್ದರೂ ತಾಂತ್ರಿಕ ಕಾರಣಗಳಿಂದ ಇಂದಿನವರೆಗೂ ಹಕ್ಕುಪತ್ರ ದೊರೆಯದ ನಿವಾಸಿಗಳ ಆತಂಕವನ್ನು ಶಾಸಕರು ಆಲಿಸಿದರು. ಈ ಸೂಕ್ಷ್ಮ ಸಮಸ್ಯೆಯನ್ನು ಕಂದಾಯ ಇಲಾಖೆಯ ನಿಯಮಾವಳಿಗಳ ಅನ್ವಯ ವಿಶೇಷ ಪ್ರಕರಣವೆಂದು ಪರಿಗಣಿಸಿ, ಅರ್ಹ ನಿವಾಸಿಗಳಿಗೆ ತಕ್ಷಣವೇ ಹಕ್ಕುಪತ್ರಗಳನ್ನು ವಿತರಿಸಲು ಕಂದಾಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಚರ್ಚಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.

S.N. Channabasappa ಭೇಟಿಯ ವೇಳೆ ಪ್ರಮುಖರಾದ ಶ್ರೀ ಲಕ್ಷ್ಮಿಕಾಂತ್, ಶ್ರೀ ದಿನೇಶ್, ಶ್ರೀ ಪರಮೇಶ್ ನಾಯ್ಕ್, ಶ್ರೀ ವೆಂಕಟೇಶ ಗೌಡ, ಶ್ರೀ ಜಗದೀಶ್, ಶ್ರೀ ವಾಸು, ಶ್ರೀ ವೆಂಕಟೇಶ್ ನಾಯ್ಕ್ ಸೇರಿದಂತೆ ಹುಚ್ಚರಾಯ ಕಾಲೋನಿಯ ಭಾಜಪದ ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...