Tuesday, July 7, 2026
Tuesday, July 7, 2026

ಶ್ರೀಶಿವನಾಗ ಪಾರ್ಥ ಅವಧೂತ ಮಹಾರಾಜರಿಗೆ ” ಕನಕಶ್ರೀ ಚೇತನ ಪತಂಜಲಿ ರತ್ನ” ಪ್ರಶಸ್ತಿ ಪ್ರದಾನ

Date:

ಪತಂಜಲಿ ಶ್ರೀ ಕನಕದಾಸರ ಅಧ್ಯಯನ ಕೇಂದ್ರ ಹಾಗೂ ಪತಂಜಲಿ ಕರ್ನಾಟಕ ಜನಪದ ಕಲಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಕನಕ ಕಥಾಕೀರ್ತನ ಮಹೋತ್ಸವ, ಸಮ್ಮೇಳನ, ತರಬೇತಿ ಕಾರ್ಯಗಾರ, ಹಾಲುಮತ ಸಂಸ್ಕೃತಿ, ಕನಕ ಕಲಾವೈಭವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಭಿಯಾನ ಹಾಗೂ ಶ್ರೀ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವನಾಗ ಪಾರ್ಥ ಅವಧೂತ ಮಹಾರಾಜರು ಮುಖ್ಯ ಅತಿಥಿಗಳಾಗಿ ಆಗಮಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಮಾಜದ ಮುಖಂಡರು, ಕಲಾವಿದರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಪರಮಪೂಜ್ಯ ಶ್ರೀ ಶಿವನಾಗ ಪಾರ್ಥ ಅವಧೂತ ಮಹಾರಾಜರಿಗೆ ಗೌರವಪೂರ್ವಕವಾಗಿ ರಾಜ್ಯ ಮಟ್ಟದ “ಕನಕ ಶ್ರೀ ಚೇತನ ಪತಂಜಲಿ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಬಳಿಕ ಗುರುಗಳ ಹಿತವಚನ ಹಾಗೂ ಆಶೀರ್ವಾದದೊಂದಿಗೆ ಕಾರ್ಯಕ್ರಮವು ಭಕ್ತಿಭಾವ, ಸಾಂಸ್ಕೃತಿಕ ವೈಭವ ಮತ್ತು ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...