Tuesday, July 7, 2026
Tuesday, July 7, 2026

ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

Date:

ಭದ್ರಾವತಿ ನಗರದ ಭೋವಿ ಕಾಲೊನಿಯ ನಿವಾಸಿ ಅಶೋಕ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೂ ಮುನ್ನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಪಾಪಣ್ಣ, ಕುಳ್ಳಿ ರಾಜೇಶ್, ಅಣ್ಣಪ್ಪ ಹಾಗೂ ಧೃವ ಎಂಬವರ ಹೆಸರನ್ನು ಉಲ್ಲೇಖಿಸಿರುವ ಅಶೋಕ, ಇಸ್ಪೀಟು ಆಡಲು ದುಬಾರಿ ಬಡ್ಡಿಗೆ ಹಣ ನೀಡಿಸಿ, ಬಳಿಕ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಲ ಹಾಗೂ ಬಡ್ಡಿ ಹಣವನ್ನು ಕೂಡಲೇ ವಾಪಸ್ ನೀಡುವಂತೆ ಒತ್ತಡ ಹೇರಿ, ಹಣ ಕೊಡದಿದ್ದರೆ ಮನೆಗೆ ಬಂದು ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

ಪಾಪಣ್ಣ ಅವರು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗೇಶ್ವರ್ ಅವರ ಸಹೋದರ ಎಂದು ಕೂಡ ಅಶೋಕ ಉಲ್ಲೇಖಿಸಿದ್ದಾರೆ.

ಇದೇ ವೇಳೆ, “ನನಗೂ ಕೆಲವರಿಂದ ಹಣ ಬರಬೇಕಿದೆ. ಡೊಳ್ಳ ಸೂರಿ ಸೇರಿದಂತೆ ಹಲವರು ಹಣ ವಾಪಸ್ ನೀಡಿಲ್ಲ. ಆದರೆ ಆ ಹಣ ಸಿಗದಿದ್ದರೂ ನನ್ನನ್ನೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ಈ ನಿರಂತರ ಕಿರುಕುಳ ಮತ್ತು ಅವಮಾನದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದೇನೆ. ನನ್ನ ಸಾವಿಗೆ ಇವರೇ ಕಾರಣ” ಎಂದು ಅಶೋಕ ವಿಡಿಯೊದಲ್ಲಿ ಆರೋಪಿಸಿದ್ದಾರೆ.

ಈ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...