Sunday, August 23, 2026
Sunday, August 23, 2026

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Date:

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ ಇದರ ಆಶ್ರಯದಲ್ಲಿ ಕಳೆದ 18 ವರ್ಷಗಳಿಂದ ನಿರಂತರವಾಗಿ ಅತ್ಯಂತ ಯಶಸ್ವಿಯಾಗಿ ಶ್ರೀ ಶ್ರೀ ಭಗವದ್ಗೀತಾ ಅಭಿಯಾನ ನಡೆಯುತ್ತಾ ಬಂದಿದೆ. ಪ್ರಸ್ತುತ 2026 ರ ಶ್ರೀ ಭಗವದ್ಗೀತಾ ಅಭಿಯಾನವು ವಿಜಯನಗರ ಜಿಲ್ಲೆಯನ್ನು ಕೇಂದ್ರಿತವಾಗಿ ನಡೆಸುವುದಾಗಿ ಶ್ರೀ ಶ್ರೀಗಳು ಆದೇಶಿಸಿದ್ದಾರೆ. ಅದರಂತೆಯೇ ಪರಮ ಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠ, ಹೊಸಪೇಟೆ ಯಲ್ಲಿ ಪೂರ್ವಭಾವಿಯಾಗಿ ವಿಜಯನಗರ ಜಿಲ್ಲಾ ಮಟ್ಟದ ಪ್ರಮುಖರ ಸಭೆ ಯಶಸ್ವಿಯಾಗಿ ನಡೆಯಿತು.
ಅಭಿಯಾನದ ಮುಖ್ಯ ಉದ್ದೇಶವಾದ ಭಗವದ್ಗೀತೆಯ ಸಾರ್ವಕಾಲಿಕ ಸಂದೇಶಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವುದು. ಈ ಉದ್ದೇಶವನ್ನು ಸಾಕಾರ ಗೊಳಿಸಲು, ಅಭಿಯಾನದ ಯಶಸ್ಸಿಗೆ ಜಿಲ್ಲಾ ಮಟ್ಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.

Sri Sonda Swarnavalli Mahasansthan ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರು ಸಭೆಯ ಮುಖ್ಯ ಮಾರ್ಗದರ್ಶನ ಹಾಗೂ ಆಶೀರ್ವಚನವನ್ನು ನೀಡಿದರು. ಸ್ಥಳೀಯ ಮಠಾಧೀಶರಾದ ಹೊಸಪೇಟೆಯ ಕಾಮಾಕ್ಷಿ ದೇವಸ್ಥಾನದ ಶ್ರೀ ಶ್ರೀಮದ್ ಅಂಜನಾನಂದ ಸರಸ್ವತೀ ಮಹಾಸ್ವಾಮಿಗಳು, ಹೊಸಪೇಟೆಯ ಗೀತಾಶ್ರಮದ
ಸುಮೇದಾನಂದ ಸ್ವಾಮಿಗಳು ದಿವ್ಯ ಸಾನ್ನಿಧ್ಯವನ್ನು ನೀಡಿದ್ದರು.
ತಾಲ್ಲೂಕು ಮತ್ತು ಗ್ರಾಮ ಮಟ್ಟದ ಸಮಿತಿಗಳ ರಚನೆ, ವಿಜಯನಗರ ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಗೀತಾ ಅಭಿಯಾನವನ್ನು ತಲುಪಿಸಲು ಪ್ರತ್ಯೇಕ ಕಾರ್ಯಕರ್ತರ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...