Thursday, July 9, 2026
Thursday, July 9, 2026

ವಿದ್ಯಾರ್ಥಿಗಳ ಸಾಧನೆಯು ಸಂಘಕ್ಕೆ ಹೆಮ್ಮೆಯ ವಿಷಯ- ಎಂ.ಸಿ.ದೇವರಾಜ್

Date:

ಶಿವಮೊಗ್ಗ ಜಿಲ್ಲಾ ವಿತರಕರ ಸಂಘ (ರಿ.) ವತಿಯಿಂದ ಮೂರನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಪಡೆದು ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳಾದ ಕು|| ಶಾರ್ವಿ ಗೋಪಿನಾಥ್, ಶ್ರೀ ಸೃಜನ್ ಶೆಟ್ಟಿ, ಕು|| ಬಿ.ವಿ. ತ್ರಿಷಾ ಜೈನ್, ಕು ||ಅದ್ವಿಕಾ ಜವಳಿ, ಕು||ಕೌಸ್ತುಭ ಎಸ್., ಶ್ರೀ ನಿವಾಸ್ ಪಿ. ಶ್ರೀ ಪ್ರಭು, ಕು ||ಲಕ್ಷ್ಮೀ ಪ್ರಭು, ಕು ||ಎಂ.ಆರ್. ನಾಗಸ್ವರ್ಣ ಹಾಗೂ ಶ್ರೀ ಎಂ.ಜಿ. ನಾಗಸ್ವರೂಪ್ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ವಿದ್ಯಾರ್ಥಿಗಳ ಸಾಧನೆಯು ಸಂಘಕ್ಕೆ ಹೆಮ್ಮೆಯ ವಿಷಯವಾಗಿದ್ದು, ಶಿಕ್ಷಣಕ್ಕೆ ಉತ್ತೇಜನ ನೀಡುವ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಮುಂದಿನ ವರ್ಷಗಳಲ್ಲಿ ಇನ್ನಷ್ಟು ವೈಭವದಿಂದ ಆಯೋಜಿಸಲಾಗುವುದು ಎಂದು ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳನ್ನು ಕುರಿತು ಸಂಘದ ಅಧ್ಯಕ್ಷರಾದ ದೇವರಾಜ್ ಎಂ.ಸಿ. ರವರು ಮಾತನಾಡಿದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರು ಹಾಗೂ ನಮ್ಮ ಸಂಘದ ಗೌರವಾಧ್ಯಕ್ಷರಾದ ಗೋಪಿನಾಥ್ ಬಿ ರವರು ಮಾತನಾಡುತ್ತಾ, ಭಾರತದಲ್ಲಿ ಕುಟುಂಬ ವ್ಯವಹಾರ ನಿರ್ವಹಣೆ— ಸವಾಲುಗಳು ಮತ್ತು ಭವಿಷ್ಯ ವಿಷಯವಾಗಿ ವಿಚಾರಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಮಾಜಿ ಅಧ್ಯಕ್ಷರುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಬದರಿನಾಥ್ ಬಿ ಆರ್, ಕಾರ್ಯದರ್ಶಿ ಗಿರೀಶ್ ಒಡೆಯರ್, ಗೌರವ ಕಾರ್ಯದರ್ಶಿಗಳಾದ ಶ್ರೀನಿವಾಸ್ ಖಜಾಂಚಿಗಳಾದ ಚಂದ್ರಶೇಖರ್ ಕೆ.ಕೆ, ವಿಶೇಷ ಆಹ್ವಾನಿತರಾದ ಹಾಜಿ ಸುಲೇಮಾನ್ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶಿವರಾಜ್ ಉಡುಗಣಿ, ನಿರ್ದೇಶಕರುಗಳಾದ ಮೋಹನ್ ಕೆ ಎಸ್, ನವೀನ್ ಜವಳಿ, ಮಹಾರುದ್ರಪ್ಪ ಕೆ ವಿ, ಕುಮಾರ್ ಎ ಎಂ, ಮಹಮದ್ ಇಕ್ಬಾಲ್, ಸುರೇಂದ್ರನಾಥ, ರಾಘವೇಂದ್ರ ಎಂ ವೈ ಹಾಗೂ ಸಂಘದ ಗಣ್ಯಮಾನ್ಯ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....