Sunday, August 23, 2026
Sunday, August 23, 2026

ಅಮೂಲ್ಯ ಜೀವಗಳನ್ನ ಉಳಿಸಲು ನೌಕರರು ಮತ್ತು ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡಿ: ಅನೂಪ್ ಕುಮಾರ್

Date:

ಭದ್ರಾವತಿಯ ಸೈಲ್- ವಿಐಎಸ್‌ಎಲ್ ಆಸ್ಪತ್ರೆ ಮತ್ತು ಜೀವ ಸಂಜೀವಿನಿ ಸ್ವಯಂಸೇವಾ ರಕ್ತ ಕೇಂದ್ರದ ಸಹಯೋಗದೊಂದಿಗೆ ಜುಲೈ ೮, ೨೦೨೬ ರಂದು ಭದ್ರಾವತಿಯ ಸೈಲ್-ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಈ ಸಂರ್ದಭದಲ್ಲಿ ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಶ್ರೀ ಟಿ. ರವಿಚಂದ್ರನ್, ಮಹಾಪ್ರಬಂಧಕರು ಪ್ರಭಾರಿ (ಸ್ಥಾವರ), ಡಾ|| ಕೆ.ಎಸ್. ಸುಜೀತ್ ಕುಮಾರ್, ಹೆಚ್ಚುವರಿ ಮುಖ್ಯ ವೈಧ್ಯಾಧಿಕಾರಿಗಳು, ಶ್ರೀ ಅಮೃತ್ ಕುಮಾರ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ರಾಜು ನರಸಯ್ಯ ಆಡಳಿತಾಧಿಕಾರಿಗಳು ಜೀವ ಸಂಜೀವಿನಿ ಸ್ವಯಂಸೇವಾ ರಕ್ತ ಕೇಂದ್ರ ಇವರುಗಳು ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಅನೂಪ್ ಕುಮಾರ್, ಸ್ವಯಂಪ್ರೇರಿತ ರಕ್ತದಾನದ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಅಮೂಲ್ಯ ಜೀವಗಳನ್ನು ಉಳಿಸಲು ನೌಕರರು ಮತ್ತು ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀ ರಾಜು ನರಸಯ್ಯ ಮತ್ತು ಡಾ|| ಕೆ.ಎಸ್. ಸುಜೀತ್ ಕುಮಾರ್ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು.

ವಿಐಎಸ್‌ಎಲ್‌ನ ಉಪ ಮುಖ್ಯ ವೈಧ್ಯಾಧಿಕಾರಿ ಡಾ|| ಶೋಭ.ಹೆಚ್ ಸ್ವಾಗತಿಸಿದರು ಹಾಗೂ ವಂದನಾರ್ಪಣೆಗೈದರು.

ಶಿಬಿರದಲ್ಲಿ ವಿಐಎಸ್‌ಎಲ್ ಉದ್ಯೋಗಿಗಳು, ಗುತ್ತಿಗೆ ಕಾರ್ಮಿಕರು, ಸಂಚಾರ ಪೋಲೀಸ್ ಇಲಾಖೆಯ ಸಿಬ್ಬಂದಿ ಮತ್ತು ಸ್ವಯಂಸೇವಕರು ಉತ್ಸಾಹದಿಂದ ಭಾಗವಹಿಸಿ, ಸ್ವಯಂಪ್ರೇರಿತ ರಕ್ತದಾನದ ಮೂಲಕ ಜೀವಗಳನ್ನು ಉಳಿಸುವ ಉದ್ದೇಶಕ್ಕೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...