Friday, July 10, 2026
Friday, July 10, 2026

Department Of Horticulture Karnataka ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಭದ್ರಾವತಿ ತೋಟಗಾರಿಕೆ ಇಲಾಖೆ ಪ್ರಕಟಣೆ.

Date:

Department Of Horticulture Karnataka ಭದ್ರಾವತಿ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು,ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಗಾಗಿ ಭದ್ರಾವತಿ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವಂತೆ ಹಾಗೂ ಈ ಕಾರ್ಯಕ್ರಮಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
Department Of Horticulture Karnataka ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ-7975537143, ಹೊಳೆಹೊನ್ನೂರು-1 – 8317404476, ಹೊಳೆಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ನ್ನು ಸಂಪರ್ಕಿಸಬಹುದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...