Saturday, July 11, 2026
Saturday, July 11, 2026

ಸಾರ್ವಜನಿಕರಿಗೆ ವಿಶೇಷವಾಗಿ ಬಡವರು,ಮಧ್ಯಮ ವರ್ಗದವರಿಗೆ ಅತ್ಯುತ್ತಮ ,ಉಚಿತ ವೈದ್ಯಕೀಯ ಚಿಕಿತ್ಸೆ ನೀಡಿಕೆ ಪ್ರಮುಖ ಕರ್ತವ್ಯ- ಸಚಿವ.ಯು.ಟಿ.ಖಾದರ್

Date:

“ಕ್ಷೇತ್ರದ ಸಾರ್ವಜನಿಕರಿಗೆ, ಅದರಲ್ಲೂ ವಿಶೇಷವಾಗಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಅತ್ಯುತ್ತಮ ಮತ್ತು ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಪ್ರಮುಖ ಕರ್ತವ್ಯವಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.

ಇಂದು ಬೆಳಿಗ್ಗೆ ಮಾನ್ಯ ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಶಿವಮೊಗ್ಗ ನಗರಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಶಿವಮೊಗ್ಗ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಯ ಹಲವು ಸಮಸ್ಯೆಗಳನ್ನು ಮಾನ್ಯ ಸಚಿವರ ಗಮನಕ್ಕೆ ತಂದು, ತಕ್ಷಣವೇ ಇತ್ಯರ್ಥಪಡಿಸುವಂತೆ ಶಾಸಕ ಚನ್ನಿ ಒತ್ತಾಯಿಸಿದರು.

ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಗೆ ಮುಕ್ತಿ: ಮೆಗ್ಗಾನ್ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗಳು ಹಾಗೂ ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಕಿಡ್ನಿ ರೋಗಿಗಳು ಎದುರಿಸುತ್ತಿರುವ ತೊಂದರೆಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ರೋಗಿಗಳಿಗೆ ಯಾವುದೇ ವಿಳಂಬವಿಲ್ಲದೆ ತಡೆರಹಿತ ಚಿಕಿತ್ಸೆ ಸಿಗುವಂತೆ ವ್ಯವಸ್ಥೆಯನ್ನು ತಕ್ಷಣವೇ ಸುಧಾರಿಸಲು
ಶಾಸಕ ಎಸ್.ಎನ್.ಚನ್ನಬಸಪ್ಪ ಆಗ್ರಹಿಸಿದರು.

ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನೇಮಕ: ದಿನದಿಂದ ದಿನಕ್ಕೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ, ಅದಕ್ಕೆ ತಕ್ಕಂತೆ ಮೆಗ್ಗಾನ್ ಆಸ್ಪತ್ರೆಗೆ ಅತ್ಯಗತ್ಯವಾಗಿ ಬೇಕಾಗಿರುವ ಹೆಚ್ಚುವರಿ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಗಳನ್ನು ಮಂಜೂರು ಮಾಡುವಂತೆ ಸಚಿವರಲ್ಲಿ ಶಾಸಕರು ವಿನಂತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...