Saturday, September 12, 2026
Saturday, September 12, 2026

ಬುಳ್ಳಾಪುರದಲ್ಲಿ ಫೈಬರ್ ದೋಟಿ ವಿದ್ಯುತ್ ತಂತಿಗೆ ತಾಗಿ ಕೃಷಿಕರ ದುರ್ಮರಣ.ಪ್ರಕರಣ ದಾಖಲು

Date:

ಶಿವಮೊಗ್ಗ ಜಿಲ್ಲೆಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ರೈತರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ ಬುಳ್ಳಾಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಶಿವಮೊಗ್ಗ ತಾಲ್ಲೂಕಿನ ಹೊಳೆಹೊನ್ನೂರು ಸಮೀಪದ ಬುಳ್ಳಾಪುರ ಗ್ರಾಮದ ಬಸವರಾಜಪ್ಪ ಗೌಡ (55) ಮೃತಪಟ್ಟ ರೈತ ಎಂದು ಗುರುತಿಸಲಾಗಿದೆ.

ತಮ್ಮ ತೋಟದಲ್ಲಿ ಫೈಬರ್ ದೋಟಿ (ಕೋಲು) ಬಳಸಿ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತೋಟದ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಫೈಬರ್ ದೋಟಿ ತಗುಲಿದ ಪರಿಣಾಮ ಬಸವರಾಜಪ್ಪ ಗೌಡ ಅವರಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...