Saturday, September 12, 2026
Saturday, September 12, 2026

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

Date:

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ ಹಾಗೂ ಪಕ್ಷದ ಸಂಘಟನಾತ್ಮಕ ಪ್ರವಾಸವು ಮಧ್ಯಾಹ್ನದ ಬಳಿಕವೂ ಯಶಸ್ವಿಯಾಗಿ ಮುಂದುವರಿಯಿತು.

ಪ್ರವಾಸದ ಭಾಗವಾಗಿ ಸಂಸದ ಬಿ.ವೈ. ರಾಘವೇಂದ್ರ ಅವರು ಮುದ್ದನಹಳ್ಳಿ, ಬೇಗೂರು, ಬಗನಕಟ್ಟೆ ಹಾಗೂ ಮಾರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರಗಳಿಗೆ ಭೇಟಿ ನೀಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸ್ತುತ ಜಾರಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 (SIR) ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದ ಅವರು, ಯಾವುದೇ ಅರ್ಹ ಯುವ ಮತದಾರರು ನೋಂದಣಿಯಿಂದ ವಂಚಿತರಾಗದಂತೆ ಜಾಗೃತಿ ಮೂಡಿಸಲು ಬೂತ್ ಮಟ್ಟದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬಳಿಕ ವಿವಿಧ ಗ್ರಾಮಗಳಲ್ಲಿ ಸ್ಥಳೀಯ ನಾಗರಿಕರು ಹಾಗೂ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳು ಮತ್ತು ಅಭಿಪ್ರಾಯಗಳನ್ನು ಆಲಿಸಿದರು. ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ, ನೀರಾವರಿ ಸೇರಿದಂತೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಸಲ್ಲಿಸಲಾದ ಅಹವಾಲುಗಳು ಮತ್ತು ಅರ್ಜಿಗಳನ್ನು ಸ್ವೀಕರಿಸಿದ ಅವರು, ಅವುಗಳ ಶೀಘ್ರ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಅಗತ್ಯ ಸೂಚನೆಗಳನ್ನು ನೀಡಿದರು.

B.Y. Raghavendra ಈ ಸಂದರ್ಭದಲ್ಲಿ ಹಿರಿಯ ಮುಖಂಡ ಕೆ.ಎಸ್. ಗುರುಮೂರ್ತಿ, ತಾಲೂಕಿನ ಬಿಜೆಪಿ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಪಕ್ಷದ ವಿವಿಧ ಶಕ್ತಿಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಳ್ಳಿಗಳ ಸಮಗ್ರ ಅಭಿವೃದ್ಧಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ತಮ್ಮ ನಿರಂತರ ಶ್ರಮ ಮುಂದುವರಿಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...