Monday, July 13, 2026
Monday, July 13, 2026

ಮುಪ್ಪಾನೆ ಲಾಂಚ್ ಇಂದಿನಿಂದ ಪುನರಾರಂಭ: ಸುತ್ತಮುತ್ತಲ ಜನತೆಯಲ್ಲಿ ಮೂಡಿದ ಸಂತಸ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜನರಿಗೆ ಹಾಗೂ ಪ್ರವಾಸಿಗರಿಗೆ ಸಂತಸದ ಸುದ್ದಿ. ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟ ಕುಸಿತದಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಮತ್ತೆ ಪುನರಾರಂಭವಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಪ್ಪಾನೆ ಕಡವಿನಲ್ಲಿ ಇಂದಿನಿಂದ ಲಾಂಚ್ ಸೇವೆ ಮತ್ತೆ ಆರಂಭವಾಗಿದೆ.

ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟ ತೀವ್ರವಾಗಿ ಇಳಿಕೆಯಾಗಿದ್ದ ಕಾರಣ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಕೆಲ ದಿನಗಳ ಹಿಂದೆ ಲಾಂಚ್ ಸಂಚಾರವನ್ನು ಸ್ಥಗಿತಗೊಳಿಸಿತ್ತು.

ಜೋಗ ಜಲಪಾತ ಹಾಗೂ ಸಿಗಂದೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಮುಪ್ಪಾನೆ ಲಾಂಚ್, ಕರೂರು ಮತ್ತು ಭಾರಂಗಿ ಹೋಬಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅತ್ಯಂತ ಅನುಕೂಲಕರ ಮಾರ್ಗವಾಗಿದೆ.

ಅಲ್ಲದೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ.

ಇತ್ತೀಚೆಗೆ ಸುರಿದ ಮಳೆಯಿಂದ ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಲಾಂಚ್ ಸಂಚಾರಕ್ಕೆ ಅಗತ್ಯವಿರುವಷ್ಟು ನೀರು ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಎಂದಿನಂತೆ ಲಾಂಚ್ ಸೇವೆಯನ್ನು ಪುನರಾರಂಭಿಸಲಾಗಿದೆ.

ಮುಪ್ಪಾನೆ ಲಾಂಚ್ ಸೇವೆ ಪುನರಾರಂಭವಾಗಿರುವ ಕುರಿತು ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ...

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...