ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆ ಹಾಗೂ ಪರಿಸರ ಜಾಗೃತಿಯ ಧೀಮಂತ ಹೆಜ್ಜೆಯಾಗಿ, ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆ ಹಾಗೂ ಹೋಟೆಲ್ ಶುಭಂ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಪುರದಾಳು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾಜಮುಖಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
‘ಸಸ್ಟೈನೆಬಲ್ ಸಿಪ್ಪಿಂಗ್’ ಮೂಲಕ ಪರಿಸರ ಕಾಳಜಿ:
‘ಇಂದಿನ ಮಕ್ಕಳೇ ಮುಂದಿನ ಭವಿಷ್ಯದ ನಾಯಕರು’ ಎಂಬ ಧ್ಯೇಯದೊಂದಿಗೆ, ಮಕ್ಕಳ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಸಸ್ಟೈನೆಬಲ್ ಸಿಪ್ಪಿಂಗ್’ ಪ್ರಾಜೆಕ್ಟ್ನಡಿ ಪುರದಾಳಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಲು ಕರೆ ನೀಡಲಾಯಿತು. ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಸ್ಟೀಲ್ ಬಾಟಲಿಗಳನ್ನು ಬಳಸುವಂತೆ ಪ್ರೇರೇಪಿಸಿ, ಶಾಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಟೀಲ್ ನೀರಿನ ಬಾಟಲಿಗಳನ್ನು ವಿತರಿಸಲಾಯಿತು.
450 ಜನರಿಗೆ ಆಯುಷ್ಮಾನ್ ಹಾಗೂ ಹಿರಿಯ ನಾಗರಿಕರ ಕಾರ್ಡ್ ವಿತರಣೆ:
ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಗಾಗಿ ಪುರದಾಳು ಗ್ರಾಮದ ಸುಮಾರು 450 ಕ್ಕೂ ಹೆಚ್ಚು ಜನರಿಗೆ ಆಯುಷ್ಮಾನ್ ಕಾರ್ಡ್ ಹಾಗೂ ಅರ್ಹ ಹಿರಿಯ ನಾಗರಿಕರಿಗೆ ಸೀನಿಯರ್ ಸಿಟಿಜನ್ ಕಾರ್ಡ್ಗಳನ್ನು ಸ್ಥಳದಲ್ಲೇ ಮಾಡಿಕೊಟ್ಟು ವಿತರಿಸಲಾಯಿತು.
ಅಧ್ಯಕ್ಷರ ಹೆಮ್ಮೆಯ ನುಡಿ:
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ರ ಸಾಲಿನ ಅಧ್ಯಕ್ಷರಾದ ಜೆಸಿ ವಿಜಯಲಕ್ಷ್ಮಿ ಯು. ಕದಂಬ ಅವರು ಮಾತನಾಡಿ, “ಜೆಸಿಐನಂತಹ ಅದ್ಭುತ ಸಂಸ್ಥೆಯ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವ ಇಂತಹ ಅರ್ಥಪೂರ್ಣ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮತ್ತು ಅದಕ್ಕೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ನನಗೆ ಅತ್ಯಂತ ಹೆಮ್ಮೆ ಮತ್ತು ಸಂತೋಷ ತಂದಿದೆ. ಗ್ರಾಮಸ್ಥರ ಹಾಗೂ ಶಾಲಾ ಸಿಬ್ಬಂದಿಯ ಸಹಕಾರ ಮರೆಯುವಂತಿಲ್ಲ” ಎಂದು ಹರ್ಷ ವ್ಯಕ್ತಪಡಿಸಿದರು.
ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಲಯ 24ರ ಜೋನ್ ವೈಸ್ ಪ್ರೆಸಿಡೆಂಟ್ ಜೆಸಿಐ ಸೆನೆಟರ್ ಗಣೇಶ್ ಪೈ, ಝಡ್.ವಿ.ಸಿ (ಜೋನ್ ವೈಸ್ ಚೇರ್ಮನ್) ಉದಯ್ ಕದಂಬ, ಜೆಸಿ ಜಗದೀಶ್, ಜೆಸಿ ಸಚಿನ್ ಜಿ ಹಿಳ್ಳೋಡಿ, ಜೆಸಿ ವಾಣಿ, ಜೆಸಿ ಸುಚಿತಾ ಹಾಗೂ 2026ರ ಕಾರ್ಯದರ್ಶಿ ಜೆಸಿ ಶ್ವೇತಾ ಸಚಿನ್ ಭಾಗವಹಿಸಿದ್ದರು. ಜೂನಿಯರ್ ಜೆಸಿಗಳಾದ ಜಾನವಿ, ಹೇಮಾನ್, ರಾಹುಲ್ ಹಾಗೂ ಸ್ಥಳೀಯ ಗ್ರಾಮಸ್ಥರು ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.
ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಪುರದಾಳು ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರಿಗೂ, ಶಾಲಾ ಮುಖ್ಯೋಪಾಧ್ಯಾಯರಿಗೂ ಹಾಗೂ ಅಧ್ಯಾಪಕ ವೃಂದದವರಿಗೂ ಜೆಸಿಐ ಸಂಸ್ಥೆಯ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವ ಸಮಾಜಸೇವೆ ಅರ್ಥಪೂರ್ಣ- ಜೆಸಿ ವಿಜಯಲಕ್ಷ್ಮೀ ಕದಂಬ
Date:
