ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ದಿನಾಂಕ 11.07.2026 ರಂದು ವಿದ್ಯಾನಗರ ಚೈತನ್ಯಸೌಧ ಕಟ್ಟಡದಲ್ಲಿ ಸಿ.ಎಸ್.ಸಿ ಕಾರ್ಯಕ್ರಮದಡಿಯಲ್ಲಿ ಒಲಿಂಪಿಯಾಡ್ 6.0 ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಶಿವಮೊಗ್ಗ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಮತಿ ಯಶೋಧರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಾಗೂ ಮಿಳಘಟ್ಟ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶೇಕ್ ನಿಖತ್ ಇವರು ಉಪಸ್ಥಿತರಿದ್ದರು.
ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತಡ ಮುಕ್ತ ವಾತಾವರಣವನ್ನು ಸೃಷ್ಟಿಸುವುದು, ವೃತ್ತಿಪರ ಕಲಿಕೆಗೆ ಸಹಕಾರಿ ಮತ್ತು ನಾಯಕತ್ವ ಸಂವಹನ ಕೌಶಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದಲ್ಲಿ ಸಲಹೆ ನೀಡಲು ಉತ್ತಮ ಪರಿಸರ ವ್ಯವಸ್ಥೆ ನಿರ್ಮಿಸುವುದು, ಪ್ರಾಥಾಮಿಕ ಶಾಲಾ ಹಂತದಲ್ಲಿ Digital Platform ಗಳ ಮೂಲಭೂತ ತಿಳುವಳಿಕೆ ನೀಡಲು, ವಿಧ್ಯಾರ್ಥಿಗಳಿಗೆ ಬಿಡುವಿನ ವೇಳೆಯನ್ನು ಸದುಪಯೋಗ ಮಾಡಿಕೊಳ್ಳಲು ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ತಾಲೂಕಿನಲ್ಲಿ 530 ವಿಧ್ಯಾರ್ಥಿಗಳಿಗೆ ಒಲಂಪಿಯಾಡ್ 6.0 ಪರೀಕ್ಷೆಗಳನ್ನು ನಡೆಸಿ ಪ್ರಮಾಣ ಪತ್ರವನ್ನು ವಿತರಣೆ ಮಾಡಲಾಯಿತು.
ಸಿಎಸ್ ಸಿ ಕಾರ್ಯಕ್ರಮದಡಿ ಶಿವಮೊಗ್ಗ ತಾಲೂಕಿನಲ್ಲಿ 530 ವಿದ್ಯಾರ್ಥಿಗಳಿಗೆ ಒಲಂಪಿಯಾಡ್ 6.೦ ಪರೀಕ್ಷೆ ಏರ್ಪಾಡು
Date:
