Saturday, September 12, 2026
Saturday, September 12, 2026

ಸಿಎಸ್ ಸಿ ಕಾರ್ಯಕ್ರಮದಡಿ ಶಿವಮೊಗ್ಗ ತಾಲೂಕಿನಲ್ಲಿ 530 ವಿದ್ಯಾರ್ಥಿಗಳಿಗೆ ಒಲಂಪಿಯಾಡ್ 6.೦ ಪರೀಕ್ಷೆ ಏರ್ಪಾಡು

Date:

ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ದಿನಾಂಕ 11.07.2026 ರಂದು ವಿದ್ಯಾನಗರ ಚೈತನ್ಯಸೌಧ ಕಟ್ಟಡದಲ್ಲಿ ಸಿ.ಎಸ್.ಸಿ ಕಾರ್ಯಕ್ರಮದಡಿಯಲ್ಲಿ ಒಲಿಂಪಿಯಾಡ್ 6.0 ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಶಿವಮೊಗ್ಗ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಮತಿ ಯಶೋಧರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಾಗೂ ಮಿಳಘಟ್ಟ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶೇಕ್ ನಿಖತ್ ಇವರು ಉಪಸ್ಥಿತರಿದ್ದರು.
ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತಡ ಮುಕ್ತ ವಾತಾವರಣವನ್ನು ಸೃಷ್ಟಿಸುವುದು, ವೃತ್ತಿಪರ ಕಲಿಕೆಗೆ ಸಹಕಾರಿ ಮತ್ತು ನಾಯಕತ್ವ ಸಂವಹನ ಕೌಶಲ್ಯಗಳನ್ನು ಮಕ್ಕಳಲ್ಲಿ ಬೆಳೆಸಲು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದಲ್ಲಿ ಸಲಹೆ ನೀಡಲು ಉತ್ತಮ ಪರಿಸರ ವ್ಯವಸ್ಥೆ ನಿರ್ಮಿಸುವುದು, ಪ್ರಾಥಾಮಿಕ ಶಾಲಾ ಹಂತದಲ್ಲಿ Digital Platform ಗಳ ಮೂಲಭೂತ ತಿಳುವಳಿಕೆ ನೀಡಲು, ವಿಧ್ಯಾರ್ಥಿಗಳಿಗೆ ಬಿಡುವಿನ ವೇಳೆಯನ್ನು ಸದುಪಯೋಗ ಮಾಡಿಕೊಳ್ಳಲು ಮತ್ತು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ತಾಲೂಕಿನಲ್ಲಿ 530 ವಿಧ್ಯಾರ್ಥಿಗಳಿಗೆ ಒಲಂಪಿಯಾಡ್ 6.0 ಪರೀಕ್ಷೆಗಳನ್ನು ನಡೆಸಿ ಪ್ರಮಾಣ ಪತ್ರವನ್ನು ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಶಾಸಕ ” ಚೆನ್ನಿ” ಅವರಿಂದ ಕಾಮಗಾರಿಗಳಿಗೆ ಭೂಮಿ ಪೂಜೆ

S. N. Channabasappa ಶಿವಮೊಗ್ಗ ನಗರದ ಪ್ರತಿಯೊಂದು ವಾರ್ಡ್ ಹಾಗೂ ಬಡಾವಣೆಗಳಲ್ಲಿ...

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...