B.Y. Raghavendra ಪ್ರತಿಷ್ಠಿತ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ ನಮ್ಮ ಹೆಮ್ಮೆಯ ‘ಶಿವಮೊಗ್ಗ ಯೋಧಾಸ್’ ತಂಡಕ್ಕೆ ಹಾರ್ದಿಕ ಅಭಿನಂದನೆಗಳು.
ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
