Tuesday, July 14, 2026
Tuesday, July 14, 2026

S.N. Channabasappa ಸ್ವಚ್ಛತಾ ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಿ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ “ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪಾತ್ರ ಅತ್ಯಂತ ಹಿರಿದಾಗಿದ್ದು, ಅವರ ಸುರಕ್ಷತೆ, ಉತ್ತಮ ಆರೋಗ್ಯ ಮತ್ತು ಯಾಂತ್ರಿಕೃತ ತರಬೇತಿಗೆ ಸರ್ಕಾರ ಹಾಗೂ ಜಿಲ್ಲಾಡಳಿತವು ವಿಶೇಷ ಆದ್ಯತೆ ನೀಡಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ ‘ನಮಸ್ತೆ ದಿನಾಚರಣೆ – ೨೦೨೬’ ವಿಶೇಷ ಜಾಗೃತಿ ಅಭಿಯಾನ ಮತ್ತು ಸ್ವಚ್ಛತಾ ಸಿಬ್ಬಂದಿಗಳ ಆರೋಗ್ಯ ಹಾಗೂ ಕಾರ್ಯನಿರ್ವಹಣೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

S.N. Channabasappa ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ನಮಸ್ತೆ’ (NAMASTE) ಯೋಜನೆಯಡಿ ಸ್ವಚ್ಛತಾ ಕಾರ್ಯದಲ್ಲಿ ಮಾನವ ಶ್ರಮದ ಜೊತೆಗೆ ಆಧುನಿಕ ಯಂತ್ರೋಪಕರಣಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಸಿಬ್ಬಂದಿಗಳ ಸುರಕ್ಷತೆಯನ್ನು ಕಾಯ್ದುಕೊಳ್ಳುವ ವಿಧಾನಗಳ ಕುರಿತು ಈ ಕಾರ್ಯಾಗಾರದಲ್ಲಿ ವಿಸ್ತೃತ ಮಾಹಿತಿ ನೀಡಲಾಯಿತು. ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಪಾಲಿಕೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಿಗಂದೂರು ಸೇತುವೆಗೆ ಒಂದು ವರ್ಷ: ಜನತೆಗೆ ಕನಸು ನನಸಾದ ಹರ್ಷ : ಬಿ.ವೈ.ರಾಘವೇಂದ್ರ

B.Y. Raghavendra ಐತಿಹಾಸಿಕ ಸಿಗಂದೂರು ಚೌಡೇಶ್ವರಿ ಸೇತುವೆ ರಾಷ್ಟ್ರಕ್ಕೆ ಸಮರ್ಪಣೆಯಾಗಿ ಒಂದು...

B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ

B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ...