Saturday, July 18, 2026
Saturday, July 18, 2026

Dr. G Parameshwara ಕ್ರೀಡಾ ಮತ್ತು ಯುವಸಬಲೀಕರಣ ಇಲಾಖೆಯಿಂದಮಹತ್ವದ ಕೊಡುಗೆ: ಮಾಧ್ಯಮಗೋಷ್ಠಿಯಲ್ಲಿ ವಿವಿಧ ನಿರ್ಧಾರ ತಿಳಿಸಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ.

Date:

Dr. G Parameshwara ಯಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ಕ್ರೀಡಾ ಮೂಲಸೌಕರ್ಯ, ಕ್ರೀಡಾಪಟುಗಳ ಕಲ್ಯಾಣ ಹಾಗೂ ಪ್ರೋತ್ಸಾಹ ಧನ ವಿತರಣೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಗ್ರಾಮೀಣ ಕ್ರೀಡೆಗಳಿಗೆ ಜಾಗತಿಕ ಮನ್ನಣೆ ನೀಡುವುದರಿಂದ ಹಿಡಿದು ಒಲಿಂಪಿಕ್ಸ್ ಪದಕ ಬೇಟೆಯವರೆಗೆ ಇಲಾಖೆಯು ಹತ್ತಾರು ಕ್ರಾಂತಿಕಾರಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು.

ಇಂದು ಯವನಿಕ ಸಭಾಂಗಣದಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಉಪ ಮುಖ್ಯಮಂತ್ರಿಗಳು, ನಾನು ರಾಜ್ಯದ ನೂತನ ಸರ್ಕಾರದಲ್ಲಿ ಕಂದಾಯ, ಮುಜರಾಯಿ ಹಾಗೂ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಇಂದು ತಮ್ಮ ಮೊದಲ ಅಧಿಕೃತ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ ಅವರು, ರಾಜ್ಯದ ಯುವಜನತೆಯನ್ನು ಸನ್ಮಾರ್ಗದಲ್ಲಿ ಮುನ್ನಡೆಸಲು ಮತ್ತು ಕ್ರೀಡಾ ಕ್ಷೇತ್ರಕ್ಕೆ ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ರೂಪಿಸಿರುವ ಹತ್ತಾರು ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ತಿಳಿಸಿದರು.

ಕಂಠೀರವ ಕ್ರೀಡಾಂಗಣದ ಪುನರಾಭಿವೃದ್ಧಿ:

ಬೆಂಗಳೂರಿನ ಕಂಠೀರವ ಕ್ರೀಡಾಂಗಣವನ್ನು ಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಪಿಪಿಪಿ (PPP) ಮಾದರಿಯಲ್ಲಿ ಸುಮಾರು 5,000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪುನರಾಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗುತ್ತಿದ್ದು, ಶೀಘ್ರದಲ್ಲೇ ಸಂಪುಟದ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಥಮ ಬಾರಿಗೆ ‘ಅಂತರರಾಷ್ಟ್ರೀಯ ಯುವಜನೋತ್ಸವ’:

ಬರುವ ಡಿಸೆಂಬರ್, ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಂತ ಅದ್ಧೂರಿಯಾಗಿ “ಅಂತರರಾಷ್ಟ್ರೀಯ ಯುವಜನೋತ್ಸವ” (International Youth Festival) ಆಯೋಜಿಸಲು ಮುಖ್ಯಮಂತ್ರಿಗಳ ಒಪ್ಪಿಗೆ ದೊರೆತಿದೆ. ವಿವಿಧ ದೇಶಗಳ ಯುವಜನರು ಇದರಲ್ಲಿ ಭಾಗವಹಿಸಲಿದ್ದು, ನಮ್ಮ ಸಂಸ್ಕøತಿ, ಕ್ರೀಡೆ ಮತ್ತು ವಿಚಾರಧಾರೆಗಳ ವಿನಿಮಯಕ್ಕೆ ಇದು ಸಾಕ್ಷಿಯಾಗಲಿದೆ ಎಂದು ತಿಳಿಸಿದರು.

ಯುವಶಕ್ತಿಯ ಸಬಲೀಕರಣ ಮತ್ತು ಕ್ರೀಡಾಪಟುಗಳಿಗೆ ಉತ್ತೇಜನ:

Dr. G Parameshwara ರಾಜ್ಯದ ಜನಸಂಖ್ಯೆಯಲ್ಲಿ ಶೇಕಡಾ 65 ರಷ್ಟು ಜನರು 35 ವರ್ಷದೊಳಗಿನ ಯುವಕರಾಗಿದ್ದಾರೆ. ಇವರೆಲ್ಲರೂ ಪದವಿ ಪಡೆಯುವ ಹೊತ್ತಿಗೆ ಜವಾಬ್ದಾರಿಯುತ ಮತದಾರರಾಗಿರುತ್ತಾರೆ. ಈ ಯುವಶಕ್ತಿ ದಾರಿ ತಪ್ಪದಂತೆ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ಮಾಡಲು ಕ್ರೀಡಾ ಇಲಾಖೆಯು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಹಾಜರಾತಿಯಲ್ಲಿ ವಿನಾಯಿತಿ: ಪದವಿ ಮತ್ತು ಡಿಪ್ಲೊಮಾ ಕಲಿಯುತ್ತಿರುವ ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಶೇ. 15 ರಷ್ಟು ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಶೇ. 25 ರಷ್ಟು ಕಾಲೇಜು ಹಾಜರಾತಿಯಲ್ಲಿ ವಿನಾಯಿತಿ ನೀಡಲಾಗುವುದು.

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸರ್ಕಾರವು ನೇಮಕಾತಿ ಮಾಡಿಕೊಳ್ಳಲಿರುವ ಸುಮಾರು 72,000 ಹುದ್ದೆಗಳಲ್ಲಿ ಶೇ. 2 ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ. ಇಲಾಖಾವಾರು ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಈ ಮೀಸಲಾತಿ ಸಿಗಲಿದ್ದು, ಪೆÇಲೀಸ್ ಇಲಾಖೆಯಲ್ಲಿ ಈಗಾಗಲೇ ಶೇ. 3 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ಸುನಿಲ್ (ಹಾಕಿ), ನಿಕಿನ್ ಹಾಗೂ ದಿವ್ಯಾ ಅವರಿಗೆ ಈ ಯೋಜನೆಯಡಿ ನೇಮಕಾತಿ ಆದೇಶ ನೀಡಲಾಗಿದೆ.

ಪ್ರೋತ್ಸಾಹ ಧನ ಹೆಚ್ಚಳ : ಕಾಮನ್‍ವೆಲ್ತ್ ಮತ್ತು ಏಷ್ಯನ್ ಗೇಮ್ಸ್‍ನಲ್ಲಿ ಪದಕ ವಿಜೇತರಿಗೆ ನೀಡಲಾಗುವ ನಗದು ಬಹುಮಾನದ (ಚಿನ್ನಕ್ಕೆ 35 ಲಕ್ಷ ರೂ., ಬೆಳ್ಳಿಗೆ 25 ಲಕ್ಷ ರೂ., ಕಂಚಿಗೆ 15 ಲಕ್ಷ ರೂ.) ಜೊತೆಗೆ, ಇನ್ನು ಮುಂದೆ ಕೇವಲ ದೇಶವನ್ನು ಪ್ರತಿನಿಧಿಸುವ ರಾಜ್ಯದ ಪ್ರತಿಯೊಬ್ಬ ಕ್ರೀಡಾಪಟುಗೂ ತಲಾ 5 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೊಸ ಯೋಜನೆಯಡಿ ನೀಡಲಾಗುವುದು ಎಂದು ತಿಳಿಸಿದರು.

ತರಬೇತುದಾರರ ನೇಮಕ: ಕ್ರೀಡಾಕೂಟಗಳಿಗೆ ತರಬೇತುದಾರರ ಕೊರತೆಯನ್ನು ನೀಗಿಸಲು ರಾಜ್ಯಾದ್ಯಂತ ಶೀಘ್ರದಲ್ಲೇ 50 ಕ್ರೀಡಾ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದೆ.

ಏಕಲವ್ಯ ಹಾಗೂ ಕ್ರೀಡಾ ಪ್ರಶಸ್ತಿ ಪ್ರದಾನ: ಕಳೆದ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಏಕಲವ್ಯ ಕ್ರೀಡಾರತ್ನ, ಕ್ರೀಡಾ ಪೋಷಕ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಬರುವ ಆಗಸ್ಟ್ 29 ರಂದು (ಹಾಕಿ ಜಾದೂಗಾರ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನಾಚರಣೆ) ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗಿದೆ.

ಮೈಸೂರಿನಲ್ಲಿ ವೆಲೋಡ್ರೋಮ್ ನಿರ್ಮಾಣ: ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿ 17 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಬಜೆಟ್‍ನಲ್ಲಿ ಘೋಷಿಸಿದಂತೆ ವೆಲೋಡ್ರೋಮ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ. ಬಿಜಾಪುರ, ಬಾಗಲಕೋಟೆ ಮತ್ತು ಗದಗ ಭಾಗದ ಕ್ರೀಡಾಪಟುಗಳಿಗೆ ಈಗಾಗಲೇ ಸೈಕಲ್‍ಗಳನ್ನು ವಿತರಿಸಲಾಗಿದೆ.

ಸಿಇಟಿ ಮೀಸಲಾತಿ: ಪ್ರಸ್ತುತ ವರ್ಷ ಕ್ರೀಡಾ ಕೋಟಾದಡಿ ಸುಮಾರು 115 ಕ್ರೀಡಾಪಟು ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸೀಟುಗಳನ್ನು ಹಂಚಿಕೆ ಮಾಡಲಾಗಿದೆ.

ಬರ ನಿರ್ವಹಣೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ:

ಈ ವರ್ಷ ಇಡೀ ದೇಶವೇ ಬರಗಾಲಕ್ಕೆ ತುತ್ತಾಗಿದೆ. ಪ್ರತಿ 5 ರಿಂದ 6 ವರ್ಷಕ್ಕೆ ಒಮ್ಮೆ ಒಂದು ಸೈಕಲ್ (Cycle) ಮಾದರಿಯಲ್ಲಿ ಬರಗಾಲ ಬರುತ್ತದೆ. ಇದಕ್ಕೆ ಪ್ರಮುಖ ಕಾರಣ ಎಂದರೆ ಫೆಸಿಪಿಕ್ ಮಹಾಸಾಗರದಲ್ಲಿ ಉಂಟಾಗುವ ಉಷ್ಣ ಹವಾಮಾನ ವೈಪರಿತ್ಯಾ. ಈ ಬಾರಿ ಇದು 2 ಡಿಗ್ರಿಗಿಂತ ಹೆಚ್ಚಾಗಿರುವುದರಿಂದ ಸೂಪರ್ ಎಲ್‍ನೋನ್ ಉಂಟಾಗಿದ್ದು, ಭಾರತ ದೇಶವು ಪ್ರಮುಖವಾಗಿ ಈ ಎಲ್‍ನೋನೋಗೆ ತುತ್ತಾಗಿದೆ. ಇದರಿಂದಾಗಿ ದೇಶದೆಲ್ಲಡೆ ಬರಗಾಲ ಉಂಟಾಗಿದೆ.

ಮಳೆ ಬರದೆ ರೈತರು ಕಂಗಾಲಾಗಿದ್ದು, ರಾಜ್ಯದಲ್ಲಿ 340 ತಾಲ್ಲೂಕುಗಳಲ್ಲಿ 157 ತಾಲ್ಲೂಕುಗಳಲ್ಲಿ ಮಳೆಯ ಅಭಾವ ಉಂಟಾಗಿದೆ. ಇದರಲ್ಲಿ 14 ತಾಲ್ಲೂಕುಗಳು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಬರ ಪರಿಸ್ಥಿತಿಯನ್ನು ವೀಕ್ಷಣೆ ಮಾಡಲು ನಾನು ಸಿದ್ದನಿದ್ದೆ, ಆದರೆ ಸನ್ಮಾನ್ಯ ಮುಖ್ಯಮಂತ್ರಿಗಳು ನಾನು ತಮ್ಮ ಜೊತೆ ಬರುತ್ತೇನೆ ಎಂದು ತಿಳಿಸಿದರು. ನಾನು ಮತ್ತು ಮುಖ್ಯಮಂತ್ರಿಗಳು ಖುದ್ದು,ಸುಮಾರು 16 ಜಿಲ್ಲೆಗಳಿಗೆ ಭೇಟಿ ನೀಡಿ ಈ ಬಗ್ಗೆ ಪರಿಶೀಲನೆ ಮಾಡಿದ್ದೇವೆ. ಶೋಚನೀಯ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದ್ದೇವೆ ಎಂದು ತಿಳಿಸಿದ ಅವರು ಯಾವುದೇ ರೀತಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ವಹಿಸಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕುಡಿಯು ನೀರು ತೊಂದರೆ ಇರುವ ಕಡೆ ಟ್ಯಾಂಕರ್‍ಗಳ ಮೂಲಕ ಕುಡಿಯುವ ನೀರು ವ್ಯವಸ್ಥೆ ಮಾಡಲು ಈಗಾಗಲೇ 5 ಕೋಟಿ ರೂಪಾಯಿಗಳನ್ನು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಮಾನ್ಯ ಪ್ರಧಾನ ಮಂತ್ರಿಗಳಿಗೆ ಈಗಾಗಲೇ ಪತ್ರ ಬರೆದು ಅಗತ್ಯ ನೆರವು ನೀಡುವಂತೆ ಕೋರಿದ್ದಾರೆ. ನಾನು ಸಹ ಕೇಂದ್ರದ ಕಂದಾಯ ಮಂತ್ರಿಗಳಿಗೆ, ಗೃಹ ಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದು, ಬರಪರಿಸ್ಥಿತಿ ಎದುರಿಸಲು ಅಗತ್ಯ ಮುಂಗಡ ಹಣವನ್ನು ಎನ್.ಡಿ.ಆರ್.ಎಫ್ ನಿಧಿಯಿಂದ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸುತ್ತಾ, ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರವು ಈಗಾಗಲೇ ಎಲ್ಲಾ ರಿತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 39,000 ದೇವಾಲಯಗಳು ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರಲಿವೆ. ಈ ಎಲ್ಲಾ ದೇವಾಲಯಗಳನ್ನು ಎ. ಬಿ ಮತ್ತು ಸಿ. ವರ್ಗಗಳಾಗಿ ವಿಂಗಡಿಸಲಾಗಿದೆ. ಎ. ವರ್ಗದ ದೇವಾಲಯಗಳ ವ್ಯಾಪ್ತಿಯಡಿ, ಕೊಲ್ಲೂರು ಮೂಕಾಂಬಿಕೆ, ಚಾಮುಂಡಿ ದೇವಸ್ಥಾನ, ಕುಕ್ಕೆ ಸುಬ್ರಮಣ್ಯ ಇಂತಹ ದೇವಾಲಯಗಳು ಬರುತ್ತಿದ್ದು, ಈ ದೇವಾಲಯಗಳಲ್ಲಿನ ಹುಂಡಿ ಹಣವನ್ನು ಆಯಾ ದೇವಾಲಯಗಳ ಅಭಿವೃದ್ಧಿಗಾಗಿ ಬಳಸಲಾಗುತ್ತಿದೆ. ಎ ವರ್ಗದ ದೇವಾಲಯಗಳಲ್ಲಿ ಕ್ರೋಢಿಕೃತವಾಗುವ ಹಣದಲ್ಲಿ ಶೇಕಡ 10 ರಷ್ಟು ಹಣವನ್ನು ಮಾತ್ರ ಸಿ ವರ್ಗದ ದೇವಾಲಯಗಳ ಅಭಿವೃದ್ಧಿಗೆ ಬಳಸಲಾಗುವುದು.

ಎಷ್ಟೋ ದೇವಾಲಯಗಳಲ್ಲಿ ಹುಂಡಿ ಹಣ ದೋಚಿಕೊಂಡು ಹೋಗಿದ್ದಾರೆ, ಕೆಲವು ದೇವಾಲಯಗಳಲ್ಲಿ ಶೇಖರಣೆಯಾಗುವ ಹುಂಡಿಯ ಹಣದ ಬಗ್ಗೆ ನಿಖರ ಮಾಹಿತಿಯನ್ನು ನೀಡುತ್ತಿಲ್ಲ. ಇಂತಹ ಕ್ರಮಗಳಿಗೆ ಬ್ರೇಕ್ ಹಾಕಲು ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲಾ ದೇವಾಲಯಗಳಲ್ಲೂ ಸಿ.ಸಿ. ಕ್ಯಾಮೆರಾ ಅಳವಡಿಸಲು ತೀಮಾನ ಮಾಡಿದೆ. ಅಲ್ಲದೇ ಕೇಂದ್ರಿಕೃತ ಮಾಡಲು ಅನುಕೂಲವಾಗುವಂತೆ ಸರ್ವರ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದರಿಂದಾಗಿ ಮುಜರಾಯಿ ಇಲಾಖೆಯ ಆಯುಕ್ತರು ಕೇಂದ್ರಸ್ಥಾನದಲ್ಲೇ ಕುಳಿತು ಎಲ್ಲಾ ದೇವಾಲಯಗಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಬಹುದಾಗಿದೆ. ಮತ್ತು ಹಣ ದುರುಪಯೋಗ ಆಗುವುದನ್ನು ತಪ್ಪಿಸಬಹುದಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಹೊರ ರಾಜ್ಯಗಳಲ್ಲಿ ಪ್ರಮುಖ ದೇವಾಲಯಗಳಿರುವ ಜಾಗಗಳಲ್ಲಿ ನಮ್ಮ ರಾಜ್ಯದ ಆಸ್ತಿ ಇದೆ. ತಿರುಪತಿಯಲ್ಲಿ ಯಾವುದೇ ರಾಜ್ಯದ ಆಸ್ತಿ ಇರುವುದಿಲ್ಲ. ಆದರೆ ನಮ್ಮ ಕರ್ನಾಟಕ ರಾಜ್ಯಕ್ಕೆ ಮಾತ್ರ 7 ಎಕರೆ ಆಸ್ತಿ ಇದ್ದು, ಇಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಕರ್ನಾಟಕ ಭವನವನ್ನು ನಿರ್ಮಾಣ ಮಾಡಲಾಗಿದೆ. ಈಗ ಅತಿಗಣ್ಯರು ಭೇಟಿ ನೀಡುವ ಸಮಯದಲ್ಲಿ ಅವರು ತಂಗಲು ಅನುಕೂಲವಾಗುವಂತೆ ವಸತಿ ಸಮುಚ್ಛಯವನ್ನು ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ. ಅದೇ ರೀತಿ ತುಳಜಾಪುರ, ಶ್ರೀಶೈಲ, ವಾರಣಾಸಿ ಇಂತಹ ಪ್ರಮುಖ ಸ್ಥಳಗಳಲ್ಲೂ ಸಹ ನಮ್ಮ ರಾಜ್ಯದ ಆಸ್ತಿ ಇದ್ದು, ಅದನ್ನು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರರಿಂದ ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಎಲ್ಲಾ ದೇವಸ್ಥಾನಗಳಲ್ಲೂ ನಿರೀಕ್ಷೆಗೂ ಮೀರಿ ಹಣ ಇದೆ ಇದನ್ನು ರಕ್ಷಿಸಲು ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಕ್ರಮ ವಹಿಸಲಾಗಿದೆ. ಕೊಲ್ಲೂರು ಮೂಕಾಂಬಿಕ ದೇವಸ್ಥಾನದಲ್ಲಿ ಸುಮಾರು 300 ಕೋಟಿ ಇದೆ. ಬೆಂಗಳೂರು ಬನಶಂಕರಿ ದೇವಸ್ಥಾನದಲ್ಲಿ ವಾರ್ಷಿಕ 13 ಕೋಟಿ ಬರುತ್ತದೆ ಎಂದು ತಿಳಿಸಿದ್ದರು. ಆದರೆ ಅಲ್ಲಿ ಭೇಟಿ ನೀಡಿದ ವೇಳೆ ಗಮನಿಸಿದಾಗ ಸುಮಾರು 100 ಕೋಟಿ ಆದಾಯ ಬರುತ್ತದೆ ಎಂದು ಅಂದಾಜಿಸಿಲಾಗಿದೆ. ಇವೆಲ್ಲವನ್ನು ರಕ್ಷಣೆ ಮಾಡುವ ಸಲುವಾಗಿ ಒಂದು ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿರುವುದಾಗಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಮತ್ತು ಆಯುಕ್ತರಾದ ಎಂ. ಎನ್. ಅನುಚೇತ್ ಉಪಸ್ಥಿತರಿದ್ದರು.

ಯುವಜನರು ಡ್ರಗ್ಸ್ ಮತ್ತು ಮದ್ಯಪಾನದಂತಹ ದುಶ್ಚಟಗಳಿಗೆ ಬಲಿಯಾಗದೆ ಕ್ರೀಡೆ ಹಾಗೂ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿದ್ದ 3,600 ಕಿ.ಮೀ ‘ಭಾರತ್ ಜೋಡೋ’ ಪಾದಯಾತ್ರೆಯು ದೇಶದಲ್ಲಿ ಸೋದರತ್ವ ಮತ್ತು ಭಾವೈಕ್ಯತೆಯನ್ನು ಮೂಡಿಸುವಲ್ಲಿ ಯುವಜನತೆಗೆ ಪ್ರೇರಣೆಯಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಇದರ ಅಂಗವಾಗಿ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಯುವ ಸಂಘಗಳನ್ನು ಅನುಷ್ಠಾನ ಮಾಡಲು ನಮ್ಮ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ಪ್ರಥಮ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲೂ ಯಾವುದೇ ಜಾತಿ, ಮತ, ಭೇದ, ಭಾವವಿಲ್ಲದೇ ಹಾಗೂ ಯಾವುದೇ ರಾಜಕೀಯ ಪ್ರೇರಿತಗಳಿಗೆ ಒಳಗಾಗದೇ ಎಲ್ಲಾ ಸಮುದಾಯಗಳಿಂದಲೂ 100 ರಿಂದ 150 ಯುವಕರನ್ನೊಳಗೊಂಡ ಸಂಘವನ್ನು ಆಯ್ಕೆ ಮಾಡಲಾಗುವುದು. ಪ್ರತಿ ಸಂಘಕ್ಕೆ ವಾರ್ಷಿಕ ರೂ. 10.00 ಲಕ್ಷದಂತೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಯುವ ಸಂಘಗಳು ರಾಷ್ಟ್ರದ ಇತಿಹಾಸ, ಸಂಸ್ಕøತಿ, ಸಾಹಿತ್ಯ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯುವಕರನ್ನು ಸೇರಿಸಿಕೊಳ್ಳಲಾಗುವುದು. ಈ ಜವಬ್ದಾರಿಯನ್ನು ನಿರ್ವಹಿಸಲು ಕ್ರೀಡಾ ಇಲಾಖೆಗೆ ನೀಡಲಾಗಿದೆ.

ರಾಜ್ಯದ ಯುವಜನತೆಯನ್ನು ಕ್ರೀಡೆಯಲ್ಲಿ ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಕ್ರೀಡಾ ಸಂಸ್ಕøತಿಯನ್ನು ಬಲಪಡಿಸಲು ಇಲಾಖೆಯು ಸಂಪೂರ್ಣ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...

Sahyadri Narayana Multispeciality Hospital, Shimoga ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಗೋಪಾಳದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ.

Sahyadri Narayana Multispeciality Hospital, Shimoga ನಗರದ ಗೋಪಾಳದಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ...

Pragathi Composite School ಪ್ರಬಂಧ ರಚನಾ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ಜೊತೆ ಆತ್ಮವಿಶ್ವಾಸ ವೃದ್ಧಿ – ಡಾ.ಪ್ರಭಾಕರ ರಾವ್.

Pragathi Composite School ಪಠ್ಯದ ಜೊತೆಗಿನ ಪಠ್ಯೇತರ ಚಟುವಟಿಕೆಗಳು ವಿದ್ಯಾಭ್ಯಾಸದಲ್ಲಿ ಅಂಕಗಳಿಕೆ,...

Klive Special Aerticle ಚಿನ್ನಕ್ಕಿಂತಲೂ ಚೆನ್ನ, ಚನ್ನಪ್ಪಯ್ಯ ಅವಧೂತರು ...

Klive Special Aerticle ದಾವಣಗೆರೆಯ ಸಮೀಪದ ಆನಗೋಡಿನಿಂದ ಸುಮಾರು 3 ಕಿ.ಮೀ...