Saturday, July 18, 2026
Saturday, July 18, 2026

ಜಿಲ್ಲಾ ವಿತರಕರ ಸಂಘಕ್ಕೆ ಅಧ್ಯಕ್ಷರಾಗಿ ಎಂ.ಸಿ.ದೇವರಾಜ್ ಪುನರಾಯ್ಕೆ

Date:

ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷರಾಗಿ ಎಂ.ಸಿ.ದೇವರಾಜ್ ಅವರು ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಸಂಘದ ನೂತನ ಕಾರ್ಯದರ್ಶಿಯಾಗಿ ಕೆ.ಕೆ.ಚಂದ್ರಶೇಖರ್ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ನೂತನ ಆಡಳಿತ ಮಂಡಳಿಯು ಇತ್ತೀಚೆಗೆ ಏರ್ಪಡಿಸಿದ್ದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿ ಎಂ.ಸಿ.ದೇವರಾಜ, ಗೌರವ ಅಧ್ಯಕ್ಷರಾಗಿ ಬಿ.ಗೋಪಿನಾಥ್, ಐಪಿಪಿ ಶಿವರಾಜ್ ಉಡುಗಣಿ, ಉಪಾಧ್ಯಕ್ಷರಾಗಿ ಬದ್ರಿನಾಥ್, ಕಾರ್ಯದರ್ಶಿಯಾಗಿ ಕೆ.ಕೆ.ಚಂದ್ರಶೇಖರ್, ಗೌರವ ಕಾರ್ಯದರ್ಶಿಯಾಗಿ ಕೆ.ಎಸ್.ಶ್ರೀನಿವಾಸ್, ಸಹ ಕಾರ್ಯದರ್ಶಿಯಾಗಿ ಕೆ.ಮಧು, ಖಜಾಂಚಿಯಾಗಿ ಎಂ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ.
ವಿಶೇಷ ಆಹ್ವಾನಿತರಾಗಿ ಹಾಜಿ ಸುಲೇಮಾನ್ ಅವರನ್ನು ನೇಮಕ ಮಾಡಲಾಗಿದೆ. ನಿರ್ದೇಶಕರಾಗಿ ಹನುಮಂತಪ್ಪ, ಗಿರೀಶ್ ಒಡೆಯರ್, ಸುರೇಂದ್ರನಾಥ್, ಮಹಮ್ಮದ್ ಇಕ್ಬಾಲ್, ಎಸ್.ಎನ್. ಶ್ರೀನಾಗ್, ಮಹಾರುದ್ರಪ್ಪ, ಕೃಷ್ಣಮೂರ್ತಿ, ರಾಜೇಶ್, ಎನ್.ಡಿ.ಸುನಿಲ್ ಹಾಗೂ ವಿಕಾಸ್ ಆಯ್ಕೆಯಾಗಿದ್ದಾರೆ.
ನೂತನ ಆಡಳಿತ ಮಂಡಳಿಯು ಜಿಲ್ಲೆಯ ವಿತರಕರ ಹಿತಾಸಕ್ತಿ ಕಾಪಾಡುವುದು, ಸದಸ್ಯರಿಗೆ ಅಗತ್ಯ ಮಾರ್ಗದರ್ಶನ ನೀಡುವುದು, ಸಂಘವನ್ನು ಮತ್ತಷ್ಟು ಸದೃಢಗೊಳಿಸುವುದು ಹಾಗೂ ವಿತರಕರ ಸಮಸ್ಯೆಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...

Sahyadri Narayana Multispeciality Hospital, Shimoga ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಗೋಪಾಳದಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ.

Sahyadri Narayana Multispeciality Hospital, Shimoga ನಗರದ ಗೋಪಾಳದಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ...

Pragathi Composite School ಪ್ರಬಂಧ ರಚನಾ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ಜೊತೆ ಆತ್ಮವಿಶ್ವಾಸ ವೃದ್ಧಿ – ಡಾ.ಪ್ರಭಾಕರ ರಾವ್.

Pragathi Composite School ಪಠ್ಯದ ಜೊತೆಗಿನ ಪಠ್ಯೇತರ ಚಟುವಟಿಕೆಗಳು ವಿದ್ಯಾಭ್ಯಾಸದಲ್ಲಿ ಅಂಕಗಳಿಕೆ,...