Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕಲಾವಿದರಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.
ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಮತ್ತು ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸಲು ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲಾಗುವುದು.
ಜೊತೆಗೆ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ خریدಿಸಲು ಮತ್ತು ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನ ಆಯೋಜಿಸಲು ಸಹಾಯಧನ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸಟ್ 20 ಕೊನೆಯ ದಿನಾಂಕವಾಗಿದ್ದು ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
ಇಲಾಖೆಯ ಕಚೇರಿಯಲ್ಲಿ ನೇರವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ಅಧಿಕೃತ ವೆಬ್ಸೈಟ್ www.kannadasiri.karnataka.gov.in ನಲ್ಲಿ ನೀಡಲಾಗಿದೆ.
Department of Kannada and Culture ಹೆಚ್ಚಿನ ಮಾಹಿತಿಗಾಗಿ
ದೂರವಾಣಿ ಸಂಖ್ಯೆಗಳು: 080-24410574 / 080-22213530 / 080-22241325 / 9986837037
ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಕುವೆಂಪು ರಂಗಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಥವಾ ಆಯಾ ಜಿಲ್ಲೆಯ ಸೇವಾಸಿಂಧು ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ತಿಳಿಸಿದ್ದಾರೆ.
