Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಸಹ್ಯಾದ್ರಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಸೇವಾ ಸಂಘ (ಮಡಿಲು) ಇವರ ಸಹಯೋಗದಲ್ಲಿ ಪಿಳ್ಳಂಗೆರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಎಂಬ ವಿಷಯದ ಬಗ್ಗೆ ಹಾಗೂ ಪರೀಕ್ಷೆ ತಯಾರಿ ಬಗ್ಗೆ ಚಿಂತನ-ಮಂಥನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೆ.ಎನ್.ಎನ್.ಸಿ.ಇ. ಎಂ.ಬಿ.ಎ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಅನುರಾಧಾ ಗಿರಿಮಾಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಲಿಕೆಯ ಬಗ್ಗೆ ವಿಷಯಗಳನ್ನು ಮನನ ಮಾಡಿಕೊಳ್ಳುವ ಬಗ್ಗೆ, ಪರೀಕ್ಷೆಗಳನ್ನು ತಯಾರಿ ಮಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮನ ಮುಟ್ಟುವ ಹಾಗೆ ವಿವರವಾಗಿ ತಿಳಿಸಿಕೊಟ್ಟರು. ಈ ಬಗ್ಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ಕಂಡು ಬಂದಿತು.
ಪ್ರೊ. ಸಯ್ಯದ್ ಸನಾವುಲ್ಲಾ ಅವರು ಸಹ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಸಹ್ಯಾದ್ರಿಯ ಅಧ್ಯಕ್ಷರಾದ ಹುಲಿರಾಜ್ ಗುಬ್ಬಿ ಅವರು ಸಹ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ರೋಟರಿ ಬಗ್ಗೆ ಸಂಕ್ಷಿಪ್ತ ಮಾಹಿತಿ ಹಾಗೂ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಮಾತನಾಡಿದರು.
ಈ ಮಧ್ಯೆ 6ನೇ ತರಗತಿ ಓದುತ್ತಿರುವ ಮಾಸ್ಟರ್ ಸಚಿತ್ ಗುಬ್ಬಿರವರು ಕ್ಯಾಲಿಫೋರ್ನಿಯಾದಿಂದ ಬಂದಿದ್ದು, ಭಾರತೀಯ ಶಿಕ್ಷಣ ಹಾಗೂ ಅಮೆರಿಕಾ ಶಿಕ್ಷಣದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
Rotary Club of Shivamogga ಈ ಸಮಾರಂಭ ವಿದ್ಯಾರ್ಥಿಗಳಿಂದ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಡಾ. ಬಿ.ಯು ಕಣ್ಣಪ್ಪನವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಶಾಲೆಯ ಸಹ ಶಿಕ್ಷಕರಾದ ಧರ್ಮಪ್ಪ ಹಾಗೂ ಉಪ ಪ್ರಾಂಶುಪಾಲರಾದ ಶ್ರೀನಿವಾಸ್ರವರು ಪ್ರಾಸ್ತವಿಕವಾಗಿ ಶಾಲೆಯ ಕಾರ್ಯಕ್ರಮಗಳ ಬಗ್ಗೆ ಸಭೆಗೆ ತಿಳಿಸಿಕೊಟ್ಟರು. ಸಭೆಗೆ ಆಗಮಿಸಿದ್ದ ಅತಿಥಿಗಳನ್ನು ನಿವೃತ್ತ ಡಿ.ಡಿ.ಪಿ.ಐ. ಸುಮಂಗಳಾ ಕುಚಿನಾಡ್ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೆ.ಎನ್.ಎನ್.ಸಿ.ಇ. ಎಂ.ಬಿ.ಎ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಅನುರಾಧಾ ಗಿರಿಮಾಜಿ ಅವರ ಪರಿಚಯವನ್ನು ರಮಾ ಗುಬ್ಬಿಯವರು ಸಭೆಗೆ ಮಾಡಿಕೊಟ್ಟರು. ಕ್ಲಬ್ ನ ಕಾರ್ಯದರ್ಶಿ ಡಾ. ವೇಣುಗೋಪಾಲ್ ರೆಡ್ಡಿ ಅವರಿಂದ ವಂದನಾರ್ಪಣೆಯೊಂದಿಗೆ ಸಮಾರಂಭ ಮುಕ್ತಾಯವಾಯಿತು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ನು ಮತ್ತು ಸಿಹಿಯನ್ನು ವಿತರಿಸಲಾಯಿತು.
