Thursday, September 10, 2026
Thursday, September 10, 2026

ಶಿಲೀಂಧ್ರನಾಶಕ ಖರೀದಿಸಿದ ಅರ್ಹ ಕೃಷಿಕರು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು

Date:

2026-27 ನೇ ಸಾಲಿನ ‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ ಯೋಜನೆಯಡಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕಾಗಿ ವಿವಿಧ ಶಿಲೀಂಧ್ರನಾಶಕ ಔಷಧಿಗಳನ್ನು ಖರೀದಿಸಿದ ಜಿಲ್ಲೆಯ ರೈತರಿಂದ ತೋಟಗಾರಿಕೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.

ಮಾರ್ಗಸೂಚಿಯನುಸಾರ, ರೈತರು 1 ಎಕರೆಗೆ ಕನಿಷ್ಠ ರೂ.2,000 ಮೌಲ್ಯದ ಶಿಲೀಂಧ್ರನಾಶಕವನ್ನು ಖರೀದಿಸಬಹುದಾಗಿದ್ದು, ಖರೀದಿ ವೆಚ್ಚಕ್ಕೆ ಶೇ. 30 ರಂತೆ ಪ್ರತಿ ಎಕರೆಗೆ ಗರಿಷ್ಠ ರೂ.600 ಸಹಾಯಧನ ಸಿಗಲಿದೆ. ಪ್ರತಿಯೊಬ್ಬ ಫಲಾನುಭವಿಯು ಗರಿಷ್ಠ 5 ಎಕರೆವರೆಗೆ (ಕನಿಷ್ಠ ರೂ.10,000 ಮೌಲ್ಯದ ಶಿಲೀಂಧ್ರನಾಶಕ ಖರೀದಿ) ಶೇ. 30 ರಷ್ಟು ಅಂದರೆ ಗರಿಷ್ಠ ರೂ.3,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಈ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.
ಯೋಜನೆಯ ಲಾಭ ಪಡೆಯಲು ಇಚ್ಛಿಸುವ ರೈತರು ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಈ ಕೆಳಗಿನ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು:

ಪಹಣಿ, ಆಧಾರ್ ಕಾರ್ಡ್, ಜಿಎಸ್ ಟಿ ಬಿಲ್ (ಖರೀದಿಸಿದ ಔಷಧಿಯ ಬಿಲ್), ಜಾತಿ ಪ್ರಮಾಣ ಪತ್ರ (ಎಸ್ ಸಿ/ ಎಸ್ ಟಿ ರೈತರಿಗೆ ಮಾತ್ರ).
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -08182-279415/ 9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/ 8310662972, ಸೊರಬ – 08184-295112 /9663634388, ಸಾಗರ-08183-295124/ 9900046121, ಹೊಸನಗರ – 08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...