ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿ.ಎಸ್. ಷಡಾಕ್ಷರಿಯವರ ಜನ್ಮದಿನದ ಅಂಗವಾಗಿ, ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ, ಶಿವಮೊಗ್ಗ ವತಿಯಿಂದ ಜೀವನ ಸಂಜೆ ವೃದ್ಧಾಶ್ರಮದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ವೃದ್ಧಾಶ್ರಮದ ನಿವಾಸಿಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ತಾಜಾ ಹಣ್ಣುಗಳನ್ನು ವಿತರಿಸಿ, ಅವರೊಂದಿಗೆ ಆತ್ಮೀಯವಾಗಿ ಸಮಯ ಕಳೆಯಲಾಯಿತು. ಹಿರಿಯರ ಆರೋಗ್ಯ, ಗೌರವ ಮತ್ತು ಕ್ಷೇಮದ ಬಗ್ಗೆ ಕಾಳಜಿ ವ್ಯಕ್ತಪಡಿಸುವ ಈ ಸೇವಾ ಕಾರ್ಯವು ಮಾನವೀಯ ಮೌಲ್ಯಗಳನ್ನು ಸಾರುವ ಅರ್ಥಪೂರ್ಣ ಕಾರ್ಯಕ್ರಮವಾಗಿ ನೆರವೇರಿತು.
ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ಪದಾಧಿಕಾರಿಗಳು, ಸದಸ್ಯರು, ವೃದ್ಧಾಶ್ರಮದ ಆಡಳಿತ ಮಂಡಳಿ, ಸಿಬ್ಬಂದಿ ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
