Shivamoga News ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ತಾಲೂಕು ಆಡಳಿತ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಡಿಟೋರಿಯಂನಲ್ಲಿ ಸಮಗ್ರ ಮತದಾರರ ಪಟ್ಟಿಯ ಪರಿಷ್ಕರಣೆ 2026 ಕಾರ್ಯದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮತದಾರ ನೋಂದಣಾಧಿಕಾರಿಗಳಾದ ಶ್ರೀ ರಂಗಸ್ವಾಮಿ ಅವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ವಿಶೇಷವಾದ ಮಹತ್ವವಿದೆ. ಮತದಾರರ ಪಟ್ಟಿಯ ಶುದ್ದಿ ಮಾಡುವ ನಿಟ್ಟಿನಲ್ಲಿ ಎಸ್,ಐ,ಆರ್ (S I R) ಕಾರ್ಯಕ್ರಮ ನಡೆಯುತ್ತಿದ್ದು ಯುವ ಸಮುದಾಯ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು . ಎಲ್ಲಾ ವಿದ್ಯಾರ್ಥಿಗಳು ತಮ್ಮ ಹಾಗೂ ತಮ್ಮ ಕುಟುಂಬದ, ಬಂಧು ಬಳಗದ ನಮೂನೆಗಳನ್ನು ಭರ್ತಿ ಮಾಡಿ ಸಂಬಂಧಿಸಿದ ಬಿ ಎಲ್ ಓ ಗಳಿಗೆ ನೀಡಲು ಸಹಕರಿಸುವಂತೆ ಮನವಿ ಮಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರಾಜ್ಯಮಟ್ಟದ ಸ್ವೀಪ್ ತರಭೇತುದಾರರಾದ Shivamoga News ನವೀದ್ ಅಹ್ಮದ್ ಪರ್ವೇಶ್ ರವರು ಮಾತನಾಡುತ್ತಾ ಎಸ್ಐಆರ್ ಪ್ರಕ್ರಿಯೆಯು ದಿನಾಂಕ 29-07-2026 ರಿಂದ ಆಗಸ್ಟ್ 8 ರವರೆಗೆ ಜರುಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಗಣತಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಭರತ್, ಪರಿಸರ ಅಭಿಯಂತರ ರಾಜಕುಮಾರ್, ಗ್ರೇಡ್ 2 ತಹಶಿಲ್ದಾರ್ ರವಿಕುಮಾರ್ , ಇಂದೂಧರ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ರುದ್ರೇಶ್ ರವರು ಹಾಗೂ ನಾರಾಯಣ್ ರವರು ವಂದಾನಾರ್ಪಣೆಯನ್ನು ನಡೆಸಿಕೊಟ್ಟರು.
Shivamoga News ಎಸ್ಐಆರ್ ಪ್ರಕ್ರಿಯೆಯಲ್ಲಿ ಯುವಜನತೆ ಕಡ್ಡಾಯ ಭಾಗವಹಿಸಬೇಕು- ರಂಗಸ್ವಾಮಿ.
Date:
