Tuesday, December 9, 2025
Tuesday, December 9, 2025

ಫೆಬ್ರವರಿ 15 ರ ನಂತರ ಒಮಿಕ್ರಾನ್ ಅಬ್ಬರ ತಗ್ಗಲಿದೆ

Date:

ಓಮಿಕ್ರಾನ್ ರೂಪಾಂತರಿ‌ ಯಿಂದ ಕಂಡುಬಂದಿರುವ ಕೊರೋನಾ ಮೂರನೆ ಅಲೆಯ ಅಬ್ಬರ ಫೆಬ್ರವರಿ 15ರ ನಂತರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಬಹುತೇಕ ರಾಜ್ಯಗಳಲ್ಲಿ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಅಥವಾ ಸ್ಥಿರವಾಗಿದೆ. ದೆಹಲಿ, ಮುಂಬೈ ಹೀಗೆ ಹಲವಾರು ಮಹಾನಗರಗಳಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿಯಲ್ಲಿ ತಿಳಿಸಿದೆ.

ಶೀಘ್ರದಲ್ಲೇ ಪ್ಯಾಂಡೆಮಿಕ್ ನಿಂದ ಎಂಡೆಮಿಕ್ ಆಗಿ ಪರಿವರ್ತನೆ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಮೂರನೇ ಅಲೆ ಪರಿಣಾಮವನ್ನು ಕೊರೋನಾ ನಿರೋಧಕ ಲಸಿಕೆಗಳು ತಗ್ಗಿಸಿವೆ. ಆದರೂ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆ ಕೇಂದ್ರ ಆರೋಗ್ಯ ಸಚಿವಾಲಯವು ಸಂಪರ್ಕದಲ್ಲಿದೆ. ಅದರಲ್ಲೂ, ದೇಶದ ಶೇ. 74ರಷ್ಟು ವಯಸ್ಕರು ಲಸಿಕೆಯ 2 ಡೋಸ್ ಪಡೆದಿರುವುದು ಸಕರಾತ್ಮಕವಾಗಿದೆ.

ಆದ್ದರಿಂದ ಮೂರನೇ ಅಲೆಯಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ತಗ್ಗಿದೆ ಎಂದು ಸಚಿವಾಲಯದ ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...