Wednesday, July 8, 2026
Wednesday, July 8, 2026

ಫೆಬ್ರವರಿ 15 ರ ನಂತರ ಒಮಿಕ್ರಾನ್ ಅಬ್ಬರ ತಗ್ಗಲಿದೆ

Date:

ಓಮಿಕ್ರಾನ್ ರೂಪಾಂತರಿ‌ ಯಿಂದ ಕಂಡುಬಂದಿರುವ ಕೊರೋನಾ ಮೂರನೆ ಅಲೆಯ ಅಬ್ಬರ ಫೆಬ್ರವರಿ 15ರ ನಂತರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೊರೋನಾ ಸೋಂಕಿನ ಹೊಸ ಪ್ರಕರಣಗಳು ಬಹುತೇಕ ರಾಜ್ಯಗಳಲ್ಲಿ ನಿಧಾನವಾಗಿ ಇಳಿಕೆ ಕಾಣುತ್ತಿದೆ. ಅಥವಾ ಸ್ಥಿರವಾಗಿದೆ. ದೆಹಲಿ, ಮುಂಬೈ ಹೀಗೆ ಹಲವಾರು ಮಹಾನಗರಗಳಲ್ಲಿಯೂ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿಯಲ್ಲಿ ತಿಳಿಸಿದೆ.

ಶೀಘ್ರದಲ್ಲೇ ಪ್ಯಾಂಡೆಮಿಕ್ ನಿಂದ ಎಂಡೆಮಿಕ್ ಆಗಿ ಪರಿವರ್ತನೆ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಮೂರನೇ ಅಲೆ ಪರಿಣಾಮವನ್ನು ಕೊರೋನಾ ನಿರೋಧಕ ಲಸಿಕೆಗಳು ತಗ್ಗಿಸಿವೆ. ಆದರೂ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜೊತೆ ಕೇಂದ್ರ ಆರೋಗ್ಯ ಸಚಿವಾಲಯವು ಸಂಪರ್ಕದಲ್ಲಿದೆ. ಅದರಲ್ಲೂ, ದೇಶದ ಶೇ. 74ರಷ್ಟು ವಯಸ್ಕರು ಲಸಿಕೆಯ 2 ಡೋಸ್ ಪಡೆದಿರುವುದು ಸಕರಾತ್ಮಕವಾಗಿದೆ.

ಆದ್ದರಿಂದ ಮೂರನೇ ಅಲೆಯಲ್ಲಿ ಸಾವಿನ ಪ್ರಮಾಣ ಗಣನೀಯವಾಗಿ ತಗ್ಗಿದೆ ಎಂದು ಸಚಿವಾಲಯದ ವರದಿಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...