Friday, July 31, 2026
Friday, July 31, 2026

ಪಿಳ್ಳಂಗೆರೆಯಲ್ಲಿ ಡಿಜಿಪೇ ಲೈಟ್ ಸೇವೆಯಲ್ಲಿ ಡೆಬಿಟ್ ಕಾರ್ಡ್ ಮೂಲಕ ನಗದು ವಿತರಣೆ

Date:

ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ಶಿವಮೊಗ್ಗ ತಾಲೂಕಿನಲ್ಲಿ ಸಿ.ಎಸ್.ಸಿ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಎಲ್ಲಾ ಹಣ ಸಂಗ್ರಹಣಾ ಕೇಂದ್ರಗಳಲ್ಲಿ ಡಿಜಿ ಪೇ ಲೈಟ್ ಕಾರ್ಯಕ್ರಮವನ್ನು ಪ್ರಥಮವಾಗಿ ಪಿಳ್ಳಂಗೆರೆ ವಲಯದ ಹೊಳೆಬೆನವಳ‍್ಳಿ ಕಾರ್ಯಕ್ಷೇತ್ರದಲ್ಲಿ ಉದ್ಘಾಟನೆ ಮಾಡಲಾಯಿತು.
ಶಿವಮೊಗ್ಗ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಮತಿ ಯಶೋಧರವರು ಡಿಜಿ ಪೇ ಲೈಟ್ ಸೇವೆಯಲ್ಲಿ ಡೆಬಿಟ್ ಕಾರ್ಡ್ ಗಳ ಮೂಲಕ ನಗದು ವಿತರಣೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿಗಳು ಕಾರ್ಯಕ್ರಮದಿಂದ ಗ್ರಾಮೀಣ ಭಾಗದ ಜನರು ಬ್ಯಾಂಕ್ ಸೇವೆಗಳನ್ನು ಗ್ರಾಮ ಮಟ್ಟದಲ್ಲಿ ಪಡೆದುಕೊಳ್ಳಲು ಅನುಕೂಲವಾಗುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಊರಿನ ಮುಖಂಡರಾದ ಶೇಖರ್, ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಶಿವನಾಯಕ್, ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಜಾತ, ತಾಲೂಕು ನೋಡಲ್ ಅಧಿಕಾರಿ ಮಹೇಶ್ ಕೆ, ಸೇವಾಪ್ರತಿನಿಧಿ, ಸಿ.ಎಸ್.ಸಿ ಸೇವಾದಾರರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಮೋಸದ ಬಲೆಯ ಹಿಂದೆ ಸಿಲುಕಿದವರು.ವಿಶೇಷ ಲೇಖನ:ತಾಜುದ್ದೀನ್ ಖಾನ್.ಶಿವಮೊಗ್ಗ.

Klive Special Article ವಿಶ್ವ ಮಾನವ ಕಳ್ಳಸಾಗಣೆ ವಿರುದ್ಧದ ದಿನ –2026ರ...

Klive Special Article ಇಂದು ,ಗುರು ಪೂರ್ಣಿಮೆ” ಗುರುವಿನಿಂ ಗುರಿಯುಂ…”ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ.

Klive Special Article "ಗುರುಬ್ರಹ್ಮ ಗುರುವಿಷ್ಣು ಗುರುದೇವೋಮಹೇಶ್ವರ/ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀಗುರುವೇ...

Sagara Gangothri College of Education ಕುವೆಂಪು ವಿವಿ ಮಾನ್ಯತೆ ಇಲ್ಲ: ಸಾಗರದ ಬಿಎಡ್.ಕಾಲೇಜಿನ ವಿದ್ಯಾರ್ಥಿವೃಂದದ ಪ್ರತಿಭಟನೆ

Sagara Gangothri College of Education ಸಾಗರದ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ...