ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಹ್ಯಾದ್ರಿ ಕಲಾ ಕಾಲೇಜು
ಹಾಗೂ ಎನ್.ಎಸ್.ಎಸ್. ಘಟಕ 1 ಮತ್ತು 2, ಶಿವಮೊಗ್ಗ ,ಇವರ ಸಂಯುಕ್ತ ಆಶ್ರಯದಲ್ಲಿ
ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆ.01 ರ ಬೆಳಿಗ್ಗೆ 10.30 ಕ್ಕೆ ಸಹ್ಯಾದ್ರಿ ಕಲಾ ಕಾಲೇಜು ಸಭಾಂಗಣದಲ್ಲಿ ವ್ಯಸನಮುಕ್ತ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಿರಾಜ್ ಅಹಮದ್ ಎಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಸಹ್ಯಾದ್ರಿ ಕಲಾ ಕಾಲೇಜಿನ ಎನ್ ಎಸ್ ಎಸ್ ಘಟಕ1,2 ರ ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿ ಕ್ಷೇಮಾಧಿಕಾರಿಗಳು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಶಿವಮೊಗ್ಗ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ
ಡಾ. ಸಚಿನ್ ಓ. ಎನ್. ವಿಶೇಷ ಉಪನ್ಯಾಸ ನೀಡುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು (ಪ್ರ) ತುಕಾರಾಮ್ ರಾವ್ ಬಿ. ವಿ. ತಿಳಿಸಿದ್ದಾರೆ.
ವ್ಯಸನ ಮುಕ್ತ ದಿನವನ್ನಾಗಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನದಂದು ವಿಶೇಷ ಕಾರ್ಯಕ್ರಮ
Date:
