Sunday, August 23, 2026
Sunday, August 23, 2026

ನೋಟರಿ ಕಾಯಿದೆ ತಿದ್ದುಪಡಿ ಬೇಡ: ಪ್ರಧಾನಿಗೆ ದೇವೆಗೌಡರಿಂದ ಪತ್ರ

Date:

ಉದ್ದೇಶಿತ ನೋಟರಿ ಕಾಯ್ದೆ 1952 ತಿದ್ದುಪಡಿ ಕ್ರಮವನ್ನು ಕೈಬಿಡುವಂತೆ ಕೋರಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ನೋಟರಿ ಕಾಯ್ದೆ 1952 ರ ಸೆಕ್ಷನ್ 5ರ ಪ್ರಸ್ತಾವಿತ ತಿದ್ದುಪಡಿ ಜಾರಿಗೊಳಿಸಿದರೆ ದೇಶದ 75 ಸಾವಿರಕ್ಕೂ ಹೆಚ್ಚು ನೋಟರಿಗಳಿಗೆ ತೊಂದರೆ ಆಗಲಿದೆ. ನೋಟರಿಗಳ ಅವಧಿಯನ್ನು ಐದು ವರ್ಷಗಳಿಗೆ ಸೀಮಿತಗೊಳಿಸುವ ಮತ್ತು ನೋಟುಗಳ ಪ್ರಾಕ್ಟೀಸ್ ಪ್ರಮಾಣಪತ್ರ ಎರಡು ಅವಧಿಗಳ ಅಷ್ಟೇ ನವೀಕರಿಸುವ ನಿಯಮಗಳು ನೋಟರಿಗಳಿಗೆ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ವಕೀಲರು ನೋಟರಿ ಆದ ನಂತರ ಅದು ಶಾಶ್ವತವಾಗಿರುತ್ತದೆ. ಕಾನೂನು ವೃತ್ತಿಯು ವೇಗವಾಗಿ ವಿಕಸನಗೊಳ್ಳುತ್ತಿದೆ. 15 ವರ್ಷಕ್ಕೂ ಹೆಚ್ಚುಕಾಲ ಸರಿಯಾಗಿ ಕೆಲಸ ಮಾಡಿದವರು ಮತ್ತೆ ವಕೀಲರಾಗಿ ಪರಿಣಿತ ವಕೀಲರ ನಡುವೆ ಕೆಲಸ ಮಾಡುವುದು ಕಷ್ಟ. ಈ ಕುರಿತು ಕರ್ನಾಟಕ ರಾಜ್ಯ ನೋಟರಿ ಕಲ್ಯಾಣ ಸಂಘ ನನಗೆ ಮನವಿ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

ಉದ್ದೇಶಿತ ತಿದ್ದುಪಡಿಯ ಸಾಂವಿಧಾನಿಕ ಸಿಂಧುತ್ವದ ಕುರಿತು ನನಗೆ ಅನುಮಾನಗಳು ಕಾಡುತ್ತಿವೆ. ನೋಟರಿ ಕಾಯ್ದೆ ಸಾವಿರ 1962ರ ಸೆಕ್ಷನ್ 5ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಯು ಸಂವಿಧಾನದ 14, 19, 21 ಹಾಗೂ 309 ನೇ ವಿಧಿ ಉಲ್ಲಂಘಿಸುತ್ತವೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...