Monday, April 6, 2026
Monday, April 6, 2026

ನೋಟರಿ ಕಾಯಿದೆ ತಿದ್ದುಪಡಿ ಬೇಡ: ಪ್ರಧಾನಿಗೆ ದೇವೆಗೌಡರಿಂದ ಪತ್ರ

Date:

ಉದ್ದೇಶಿತ ನೋಟರಿ ಕಾಯ್ದೆ 1952 ತಿದ್ದುಪಡಿ ಕ್ರಮವನ್ನು ಕೈಬಿಡುವಂತೆ ಕೋರಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ನೋಟರಿ ಕಾಯ್ದೆ 1952 ರ ಸೆಕ್ಷನ್ 5ರ ಪ್ರಸ್ತಾವಿತ ತಿದ್ದುಪಡಿ ಜಾರಿಗೊಳಿಸಿದರೆ ದೇಶದ 75 ಸಾವಿರಕ್ಕೂ ಹೆಚ್ಚು ನೋಟರಿಗಳಿಗೆ ತೊಂದರೆ ಆಗಲಿದೆ. ನೋಟರಿಗಳ ಅವಧಿಯನ್ನು ಐದು ವರ್ಷಗಳಿಗೆ ಸೀಮಿತಗೊಳಿಸುವ ಮತ್ತು ನೋಟುಗಳ ಪ್ರಾಕ್ಟೀಸ್ ಪ್ರಮಾಣಪತ್ರ ಎರಡು ಅವಧಿಗಳ ಅಷ್ಟೇ ನವೀಕರಿಸುವ ನಿಯಮಗಳು ನೋಟರಿಗಳಿಗೆ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ವಕೀಲರು ನೋಟರಿ ಆದ ನಂತರ ಅದು ಶಾಶ್ವತವಾಗಿರುತ್ತದೆ. ಕಾನೂನು ವೃತ್ತಿಯು ವೇಗವಾಗಿ ವಿಕಸನಗೊಳ್ಳುತ್ತಿದೆ. 15 ವರ್ಷಕ್ಕೂ ಹೆಚ್ಚುಕಾಲ ಸರಿಯಾಗಿ ಕೆಲಸ ಮಾಡಿದವರು ಮತ್ತೆ ವಕೀಲರಾಗಿ ಪರಿಣಿತ ವಕೀಲರ ನಡುವೆ ಕೆಲಸ ಮಾಡುವುದು ಕಷ್ಟ. ಈ ಕುರಿತು ಕರ್ನಾಟಕ ರಾಜ್ಯ ನೋಟರಿ ಕಲ್ಯಾಣ ಸಂಘ ನನಗೆ ಮನವಿ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

ಉದ್ದೇಶಿತ ತಿದ್ದುಪಡಿಯ ಸಾಂವಿಧಾನಿಕ ಸಿಂಧುತ್ವದ ಕುರಿತು ನನಗೆ ಅನುಮಾನಗಳು ಕಾಡುತ್ತಿವೆ. ನೋಟರಿ ಕಾಯ್ದೆ ಸಾವಿರ 1962ರ ಸೆಕ್ಷನ್ 5ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಯು ಸಂವಿಧಾನದ 14, 19, 21 ಹಾಗೂ 309 ನೇ ವಿಧಿ ಉಲ್ಲಂಘಿಸುತ್ತವೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...